ಕನ್ನಡ ಬರುತ್ತಾ ಎಂದು ರಾಹುಲ್ ಗಾಂಧಿಗೆ ಕೇಳಿದ್ರೆ ಸಸ್ಪೆಂಡ್ ಆಗ್ತಿದ್ರಿ: ಸಿದ್ದರಾಮಯ್ಯ ಟ್ರೋಲ್

Krishnaveni K
ಮಂಗಳವಾರ, 2 ಸೆಪ್ಟಂಬರ್ 2025 (09:17 IST)

ಮೈಸೂರು: ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕನ್ನಡ ನಾಡಿಗೆ ಬಂದಿದ್ದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಕನ್ನಡ ಬರುತ್ತಾ ಎಂದು ಸಿಎಂ ಸಿದ್ದರಾಮಯ್ಯ ವೇದಿಕೆಯಲ್ಲೇ ತಮಾಷೆ ಮಾಡಿದ್ದರು. ಇದಕ್ಕೆ ನೆಟ್ಟಿಗರು ಪ್ರತಿಕ್ರಿಯಿಸಿದ್ದು ಇದೇ ಪ್ರಶ್ನೆ ರಾಹುಲ್ ಗಾಂಧಿಗೆ ಕೇಳಿದ್ರೆ ಸಸ್ಪೆಂಡ್ ಆಗ್ತಿದ್ರಿ ಎಂದಿದ್ದಾರೆ.

ಮೈಸೂರಿನಲ್ಲಿ ನಿನ್ನೆ ಅಖಿ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರಮಹೋತ್ವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿಯಾಗಿದ್ದರು. ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ್ ಥ್ಯಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಗಣ್ಯರಿದ್ದರು.

ತಮ್ಮ ಭಾಷಣದ ವೇಳೆ ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿಗಳಿಗೆ ‘ಯೂ ನೋ ಕನ್ನಡ’ ಎಂದು ತಮಾಷೆ ಮಾಡಿದ್ದರು. ಇದಕ್ಕೆ ರಾಷ್ಟ್ರಪತಿಗಳು ಮುಗುಳ್ನಕ್ಕರು. ತಮ್ಮ ಸರದಿ ಬಂದಾಗ ಭಾಷಣದಲ್ಲಿ ದ್ರೌಪದಿ ಮುರ್ಮು, ನನಗೆ ಎಲ್ಲಾ ಭಾಷೆಯೂ ಇಷ್ಟ. ಕನ್ನಡವೂ ಸ್ವಲ್ಪ ಸ್ವಲ್ಪ ಅರ್ಥವಾಗುತ್ತದೆ ಎಂದು ನಗುತ್ತಲೇ ಕೌಂಟರ್ ಕೊಟ್ಟಿದ್ದಾರೆ.

ಸಿದ್ದರಾಮಯ್ಯ ಮಾತಿಗೆ ಸೋಷಿಯಲ್ ಮೀಡಿಯಾದಲ್ಲಿ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಮ್ಮ ರಾಜ್ಯಕ್ಕೆ ಬಂದ ರಾಷ್ಟ್ರಪತಿಗಳಿಗೆ ಈ ರೀತಿ ಹೇಳಿ ಸಿಎಂ ಸಿದ್ದು ಅವಮಾನ ಮಾಡಿದರು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಮತ್ತೆ ಕೆಲವರು ಇದೇ ಪ್ರಶ್ನೆಯನ್ನು ರಾಹುಲ್ ಗಾಂಧಿಗೋ, ಸೋನಿಯಾ ಗಾಂಧಿಗೋ ಕೇಳಿ ನೋಡಿ, ನಂತ್ರ ನೀವೇ ಸಸ್ಪೆಂಡ್ ಆಗ್ತೀರಿ ಎಂದು ಕೆಲವರು ಕಾಲೆಳೆದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

ಮುಂದಿನ ಸುದ್ದಿ
Show comments