ಬಜೆಟ್ ಮಂಡನೆ ಬಳಿಕ ಸುಸ್ತಾದ ಸಿಎಂ ಸಿದ್ದುಗೆ ಅನಾರೋಗ್ಯ

Krishnaveni K
ಸೋಮವಾರ, 19 ಫೆಬ್ರವರಿ 2024 (13:56 IST)
ಬೆಂಗಳೂರು: ಬಜೆಟ್ ಅಧಿವೇಶನ ಜೊತೆಗೆ ಜಿಲ್ಲಾ ಪ್ರವಾಸದಿಂದಾಗಿ ಸುಸ್ತಾಗಿರುವ ಸಿಎಂ ಸಿದ್ದರಾಮಯ್ಯಗೆ ಸಣ್ಣ ಪ್ರಮಾಣದಲ್ಲಿ ಅನಾರೋಗ್ಯ ಕಾಣಿಸಿಕೊಂಡಿದೆ.

ಸಿಎಂ ಸಿದ್ದರಾಮಯ್ಯ ಮೊನ್ನೆಯಿಂದಲೂ ಸತತ ಓಡಾಟ ನಡೆಸುತ್ತಿದ್ದಾರೆ. ಕೇಂದ್ರದ ವಿರುದ್ಧ ಹೋರಾಟ, ಅಧಿವೇಶನ ಜೊತೆಗೆ ಸಮಾವೇಶಗಳಲ್ಲಿ ಸತತವಾಗಿ ಪಾಲ್ಗೊಂಡಿದ್ದಾರೆ. ಹೀಗಾಗಿ ಅವರಿಗೆ ಅನಾರೋಗ್ಯ, ಸುಸ್ತು ಕಾಣಿಸಿಕೊಂಡಿದೆ. ಹೀಗಾಗಿ ಕಾವೇರಿ ನಿವಾಸಕ್ಕೆ ವಿಶ್ರಾಂತಿಗೆ ತೆರಳಿದ್ದಾರೆ.

ಇಂದು ಮಧ್ಯಾಹ್ನದ ಬಳಿಕದ ಸೆಷನ್ ಗೆ ವಿಧಾನಸೌಧಕ್ಕೆ ಆಗಮಿಸುವ ನಿರೀಕ್ಷೆಯಿದೆ. ಬಜೆಟ್ ಅಧಿವೇಶನದ ಜೊತೆಗೆ ಸಮಾವೇಶದಲ್ಲಿ ನಿರಂತರವಾಗಿ ಮಾತನಾಡಿ ಸಿಎಂ ಸಿದ್ದುಗೆ ಗಂಟಲು ನೋವು ಕಾಣಿಸಿಕೊಂಡಿದೆ. ಹೀಗಾಗಿ ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ. ಮಂಗಳೂರಿನಲ್ಲಿ ಸಮಾವೇಶ ಬಳಿಕ ಮಂಡ್ಯದ ಮಳವಳಿಯಲ್ಲೂ ಸಮಾವೇಶದಲ್ಲಿ ಭಾಷಣ ಮಾಡಿದ್ದರು.

ಸಿದ್ದುಗೆ ರಿಲೀಫ್ ನೀಡಿದ ಸುಪ್ರೀಂಕೋರ್ಟ್: ಕಳೆದ ವರ್ಷ ರಸ್ತೆ ತಡೆದು ಪ್ರತಿಭಟನೆ ಮಾಡಿದ ಪ್ರಕರಣಲ್ಲಿ ಹೈಕೋರ್ಟ್ ಸಿಎಂ ಸಿದ್ದರಾಮಯ್ಯಗೆ ಇತ್ತೀಚೆಗೆ 10 ಸಾವಿರ ರೂ. ದಂಡ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಸುಪ್ರೀಂಕೋರ್ಟ್ ನಲ್ಲಿ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಮುಂದಿನ ಆದೇಶದವರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ವಿಚಾರಣೆ ನಡೆಸದಂತೆ ತಡೆ ನೀಡಿದೆ. ಆರು ವಾರಗಳೊಳಗಾಗಿ ಪ್ರತಿಕ್ರಿಯೆ ನೀಡುವಂತೆ ಕೋರ್ಟ್ ಸೂಚಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments