Select Your Language

Notifications

webdunia
webdunia
webdunia
webdunia

ದರ್ಶನ್ ಗೆ ಸಹಾಯ ಮಾಡಿದ ಸಚಿವನಿಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್

Siddaramaiah

Krishnaveni K

ಬೆಂಗಳೂರು , ಶುಕ್ರವಾರ, 30 ಆಗಸ್ಟ್ 2024 (11:21 IST)
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದ ತಪ್ಪಿಗೆ ಈಗ ಬಳ್ಳಾರಿ ಜೈಲಿಗೆ ವರ್ಗಾವಣೆಯಾಗಿರುವ ನಟ ದರ್ಶನ್ ಗೆ ಸಹಾಯ ಮಾಡಿದ್ದ ಸಚಿವನಿಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ದರ್ಶನ್ ಗೆ ಎಲ್ಲಾ ರೀತಿಯ ಸಹಾಯ ಮಾಡಲು ರಾಜ್ಯ ಸರ್ಕಾರದ ಪ್ರಭಾವಿ ಸಚಿವರೇ ವ್ಯವಸ್ಥೆ ಮಾಡಿಕೊಟ್ಟಿದ್ದರು ಎನ್ನಲಾಗಿತ್ತು. ಸಚಿವರ ಕೃಪೆಯಿಂದ ದರ್ಶನ್ ಗೆ ಜೈಲಿನಲ್ಲಿ ಬಿರಿಯಾನಿ, ಸಿಗರೇಟು, ಕಾಫಿ ಎಂದು ಎಲ್ಲಾ ರೀತಿಯ ವ್ಯವಸ್ಥೆಯೂ ಆಗಿತ್ತು.

ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರ ಸರ್ಕಾರಕ್ಕೇ ಮುಜುಗರ ತಂದಿತ್ತು. ವಿಪಕ್ಷಗಳೂ ಸರ್ಕಾರದ ವಿರುದ್ಧ ಹರಿಹಾಯ್ದಿದ್ದವು. ಇದೀಗ ಸಿಎಂ ಸಿದ್ದರಾಮಯ್ಯ ಆ ಸಚಿವರನ್ನು ಕರೆಸಿ ಹೀಗೆಲ್ಲಾ ಮಾಡಬೇಡಿ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ನಾಗೇಂದ್ರಗೆ ಆದ ಗತಿಯೇ ನಿನಗೂ ಆದರೆ ಏನು ಮಾಡ್ತೀಯಾ? ಹೀಗೆಲ್ಲಾ ಮಾಡಲು ಹೋಗಬೇಡ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ದರ್ಶನ್ ವಿರುದ್ಧ ಮರ್ಡರ್ ಕೇಸ್ ದಾಖಲಾದಾಗಲೂ ಪ್ರಭಾವಿ ಸಚಿವರು ಪ್ರಭಾವ ಬೀರಲು ಪ್ರಯತ್ನಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಆಗಲೂ ಸಿಎಂ ಸಿದ್ದರಾಮಯ್ಯ ಆ ಸಚಿವರನ್ನು ಕರೆಸಿ ಬುದ್ಧಿವಾದ ಹೇಳಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಚನ್ನಪಟ್ಟಣ ಉಪಚುನಾವಣೆ: ಯೋಗೇಶ್ವರ್ ಮೇಲೆ ಕುಮಾರಸ್ವಾಮಿ ಕಿಡಿ