ಕೊನೆಗೂ ವಿಧಾನಸೌಧಕ್ಕೆ ಬಂದ ರಾಜ್ಯಪಾಲರು: ತಾವೇ ಕರೆದೊಯ್ದ ಸಿಎಂ ಸಿದ್ದರಾಮಯ್ಯ

Krishnaveni K
ಗುರುವಾರ, 22 ಜನವರಿ 2026 (11:25 IST)
Photo Credit: X
ಬೆಂಗಳೂರು: ಸಂಘರ್ಷಗಳ ಬಳಿಕ ಕೊನೆಗೂ ಇಂದು ರಾಜ್ಯಪಾಲರು ಅಧಿವೇಶನದಲ್ಲಿ ಭಾಷಣ ಮಾಡಲು ವಿಧಾನಸೌಧಕ್ಕೆ ಬಂದಿದ್ದಾರೆ. ಸ್ವತಃ ಸಿಎಂ ಸಿದ್ದರಾಮಯ್ಯನವರೇ ಸ್ವಾಗತಿಸಿದ್ದಾರೆ.

ಮನರೇಗಾ ಯೋಜನೆಗೆ ತಿದ್ದುಪಡಿ ಮಾಡಿದ ಕೇಂದ್ರದ ವಿರುದ್ಧ ಚರ್ಚೆಗೆ ರಾಜ್ಯ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ. ಈ ಅಧಿವೇಶನಕ್ಕೆ ಮೊದಲು ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಗೆ ಭಾಷಣ ಮಾಡಬೇಕಿತ್ತು. ಆದರೆ ಸರ್ಕಾರ ಸಿದ್ಧಪಡಿಸಿರುವ ಭಾಷಣದಲ್ಲಿ ಕೆಲವು ತಿದ್ದುಪಡಿಗೆ ಸೂಚಿಸಿದ್ದ ರಾಜ್ಯಪಾಲರು ಇಲ್ಲದೇ ಹೋದರೆ ಭಾಷಣ ಮಾಡಲ್ಲ ಎಂದಿದ್ದರು.

ಇದು ರಾಜ್ಯ ಸರ್ಕಾರ ಮತ್ತು ಗವರ್ನರ್ ನಡುವೆ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಿತ್ತು. ಆದರೆ ಈಗ ಕೊನೆಗೂ ರಾಜ್ಯಪಾಲರು ವಿಧಾನಸೌಧಕ್ಕೆ ಬಂದಿದ್ದಾರೆ. ಅವರನ್ನು ಸ್ವತಃ ಸಿಎಂ ಸಿದ್ದರಾಮಯ್ಯ, ಸ್ಪೀಕರ್ ಯುಟಿ ಖಾದರ್ ಸ್ವಾಗತಿಸಿದ್ದು ವಿಧಾನಸೌಧದೊಳಗೆ ಕರೆತಂದಿದ್ದಾರೆ.

ಇಂದು, ಭಾಷಣದಲ್ಲಿ ಸರ್ಕಾರ ಸಿದ್ಧಪಡಿಸಿರುವ ಎಲ್ಲಾ ಅಂಶಗಳನ್ನು ಗವರ್ನರ್ ಓದುವ ಸಾಧ್ಯತೆಯಿಲ್ಲ. ಕೇಂದ್ರದ ವಿರುದ್ಧ ಇರುವ ಕೆಲವು ಅಂಶಗಳನ್ನು ಕೈ ಬಿಟ್ಟು ಭಾಷಣ ಮಾಡುವ ಸಾಧ್ಯತೆಯಿದೆ. ಸದ್ಯಕ್ಕೆ ಅವರು ಅಧಿವೇಶನಕ್ಕೆ ಬಂದಿರುವುದರಿಂದ ಕೊಂಚ ಮಟ್ಟಿಗೆ ವಿವಾದ ತಣ್ಣಗಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments