Webdunia - Bharat's app for daily news and videos

Install App

ಹಿಂದೂಗಳೆನಿಸಿಕೊಂಡವರಿಂದ ಹಿಂಸೆ ಎಂದು ರಾಹುಲ್ ಗಾಂಧಿ ಹೇಳಿದರೆ ಬಿಜೆಪಿಯವರಿಗ್ಯಾಕೆ ಉರಿ ಎಂದ ಸಿದ್ದರಾಮಯ್ಯ

Krishnaveni K
ಮಂಗಳವಾರ, 2 ಜುಲೈ 2024 (13:57 IST)
ಬೆಂಗಳೂರು: ಲೋಕಸಭೆಯಲ್ಲಿ ವಿಪಕ್ಷ ನಾಯಕರ ರಾಹುಲ್ ಗಾಂಧಿ ಹಿಂದೂಗಳೆನಿಸಿಕೊಂಡವರಿಂದ ಹಿಂಸಾಚಾರ ನಡೆಯುತ್ತಿದೆ ಎಂಬ ಹೇಳಿಕೆಯನ್ನು ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಹಿಂದೂಗಳು ಎಂದರೆ ಬಿಜೆಪಿ ಯಾಕೆ ಉರಿದುಕೊಳ್ಳಬೇಕು ಎಂದಿದ್ದಾರೆ.

ಲೋಕಸಭೆಯಲ್ಲಿ ರಾಹುಲ್ ಗಾಂಧಿ ಹಿಂದೂಗಳೆನಿಸಿಕೊಂಡವರಿಂದ ಹಿಂಸಾಚಾರ ನಡೆಯುತ್ತಿದೆ. ನೀವು ನಿಜವಾದ ಹಿಂದೂಗಳೇ ಅಲ್ಲ ಎಂದು ಬಿಜೆಪಿ ಸಂಸದರತ್ತ ಕೈ ತೋರಿಸಿ ಹೇಳಿದ್ದರು. ಜೊತೆಗೆ ಶಿವ, ಜೀಸಸ್, ಗುರು ನಾನಕ್ ಸೇರಿದಂತೆ ಎಲ್ಲಾ ಧರ್ಮಗಳ ದೇವರ ಫೋಟೋ ತೋರಿಸಿ ಟೀಕಾ ಪ್ರಹಾರ ನಡೆಸಿದ್ದರು. ಅವರ ಈ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ.

ತಕ್ಷಣವೇ ಎದ್ದು ನಿಂತಿದ್ದ ಪ್ರಧಾನಿ ಮೋದಿ, ಇದು ಗಂಭೀರವಾದ ವಿಷಯ. ವಿರೋಧ ಪಕ್ಷದ ನಾಯಕರು ಹಿಂದೂಗಳಿಗೆ ಅವಮಾನ ಮಾಡುತ್ತಿದ್ದಾರೆ ಎಂದಿದ್ದರು. ಆದರೆ ತಮ್ಮ ಹೇಳಿಕೆ ವಿವಾದವಾಗುತ್ತಿದ್ದಂತೇ ರಾಹುಲ್ ತಾನು ಹೇಳಿದ್ದು ಹಿಂದೂಗಳ ಹೆಸರಿನಲ್ಲಿ ರಾಜಕಾರಣ ಮಾಡುತ್ತಿರುವ ಬಿಜೆಪಿಯವರಿಗೆ ಎಂದಿದ್ದರು.

ಇದೀಗ ಸಿಎಂ ಸಿದ್ದರಾಮಯ್ಯ ಕೂಡಾ ಟ್ವೀಟ್ ಮಾಡಿ ರಾಹುಲ್ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ‘ಭಯಪಡಬೇಡಿ, ಭಯಗೊಳಿಸಬೇಡಿ ಎಂದು ಹಿಂದೂ, ಕ್ರಿಶ್ಚಿಯನ್, ಮುಸ್ಲಿಂ, ಸಿಖ್ ಸೇರಿದಂತೆ ಎಲ್ಲಾ ಧರ್ಮಗಳೂ ಹೇಳಿವೆ. ಆದರೆ ಬಿಜೆಪಿಯಲ್ಲಿ ಹಿಂದೂಗಳೆಂದು ಹೇಳಿಕೊಳ್ಳುವವರ ಕೆಲಸವೇ ಹಿಂಸೆ, ಭಯ ಮತ್ತು ಸುಳ್ಳು ಹರಡುವುದು’ ಹೀಗೆಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಹೇಳಿದರೆ ಬಿಜೆಪಿಯವರೇಕೆ ಉರಿದುಬೀಳಬೇಕು? ನರೇಂದ್ರ ಮೋದಿಯವರಿಗೆ, ಆರ್ ಎಸ್ಎಸ್ ನವರಿಗೆ ಹೇಳಿದರೆ ಅದು ಇಡೀ ಹಿಂದೂ ಸಮುದಾಯಕ್ಕೆ ಹೇಳಿದ ಹಾಗಾಗುತ್ತದಾ? ಇಂದು ಸಂಸತ್ತಿನಲ್ಲಿ ನಮ್ಮ ನಾಯಕರಾದ ರಾಹುಲ್ ಗಾಂಧಿವಯರು ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸಲಾಗದ ಬಿಜೆಪಿ, ತನಗೆ ಹೇಳಿದ ಮಾತನ್ನು ಹಿಂದೂ ಧರ್ಮಕ್ಕೆ ಹೇಳಿದ್ದಾರೆ ಎಂದು ತಿರುಚಿ ತನ್ನ ವೈಫಲ್ಯ ಮರೆಮಾಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ವ್ಯಾಟ್ಸಪ್ ನಲ್ಲಿ ಬಿಜೆಪಿ ಕೃಪಾಪೋಷಿತ ಫೇಕ್ ನ್ಯೂಸ್ ಶೂರರು ಹರಿಬಿಟ್ಟಿರುವ ಅರ್ಧಂಬರ್ಧ ವಿಡಿಯೋ ನೋಡಿ ಅದನ್ನು ಇತರರಿಗೂ ಶೇರ್ ಮಾಡದಿರಿ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments