Webdunia - Bharat's app for daily news and videos

Install App

ಲಂಚ ಪಡೆದಿದ್ದು ನಿಜವಾದ್ರೆ ರಾಜಕೀಯ ನಿವೃತ್ತಿಯಾಗ್ತೇನೆ- ಸಿಎಂ ಸಿದ್ದರಾಮಯ್ಯ

geetha
ಸೋಮವಾರ, 4 ಮಾರ್ಚ್ 2024 (18:39 IST)
ಬೆಂಗಳೂರು: ಸೋಮವಾರ ಅರಮನೆ ಮೈದಾನದಲ್ಲಿ ನಡೆದ ಗುತ್ತಿಗೆದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಎಷ್ಟೇ ಅಸಹಕಾರ ಕೊಟ್ಟರೂ ಗುತ್ತಿಗೆದಾರರ ಅಷ್ಟೂ ಹಣವನ್ನು ನಾವೇ ಹಂತ ಹಂತವಾಗಿ ಪಾವತಿಸುತ್ತೇವೆ ಎಂದರು.ನನ್ನ ಆಡಳಿತದ ಮೊದಲನೇ  ಅವಧಿಯಲ್ಲಾಗಲೀ ಅಥವಾ ಎರಡನೇ ಅವಧಿಯಲ್ಲಾಗಲೀ ಗುತ್ತಿಗೆ ಧೃಢೀಕರಣ ಪತ್ರ ನೀಡಲು ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು  ಸಿ.ಎಂ ಸಿದ್ದರಾಮಯ್ಯ  ಸವಾಲು ಹಾಕಿದ್ದಾರೆ. 
 
ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ಪ್ಯಾಕೇಜ್ ಇಲ್ಲದೆ ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಪ್ಯಾಕೇಜ್ ಪದ್ದತಿ ರದ್ದುಗೊಳಿಸುವುದು, ಬಾಕಿ ಮೊತ್ತವನ್ನು ಪಾವತಿಸುವುದು ಸೇರಿದಂತೆ ಗುತ್ತಿಗೆದಾರರು ಮುಂದಿಟ್ಟ ಎಲ್ಲಾ ಬೇಡಿಕೆಗಳ ಕುರಿತು  ಸಕಾರಾತ್ಮಕವಾಗಿ ಪ್ರತಿಕ್ರಿಯಿಸುವುದಾಗಿ ತಿಳಿಸಿದ ಸಿಎಂ, ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ನೀಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಇಬ್ಬರೂ ಬಜೆಟ್ ನಲ್ಲೇ ಘೋಷಿಸಿದರು.

ಆದರೆ ಇವತ್ತಿನವರೆಗೂ ಒಂದೇ ಒಂದು ರೂಪಾಯಿ ಕೊಟ್ಟಿಲ್ಲ ಎಂದು ಟೀಕಿಸಿದರು.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಬೋಸ್ ರಾಜು, ಜಮೀರ್ ಅಹಮದ್ ಖಾನ್ ಸೇರಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments