ಸಮಾಜದಲ್ಲಿರುವ ಕಂದಾಚಾರ ಓಡಿಸೋಣ: ಅಂಬೇಡ್ಕರ್ ಜಯಂತಿಗೆ ಸಿಎಂ ಕರೆ

ಕೃಷ್ಣವೇಣಿ ಕೆ
ಮಂಗಳವಾರ, 14 ಏಪ್ರಿಲ್ 2026 (11:02 IST)
ಬೆಂಗಳೂರು: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ ಜಯಂತಿ ಪ್ರಯುಕ್ತ ಸಂದೇಶ ನೀಡಿರುವ ಸಿಎಂ ಸಿದ್ದರಾಮಯ್ಯ ಜಾತಿ ಕಂದಾಚಾರವನ್ನು ಹೊಡೆದೋಡಿಸೋಣ ಎಂದು ಕರೆ ನೀಡಿದ್ದಾರೆ.

ಇಂದು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135 ನೇ ಜನ್ಮ ಜಯಂತಿ. ಈ ಪ್ರಯುಕ್ತ ಸೋಷಿಯಲ್ ಮೀಡಿಯಾದಲ್ಲಿ ಸಂದೇಶ ಬರೆದಿರುವ ಸಿಎಂ ಸಿದ್ದರಾಮಯ್ಯ ಬಾಬಾ ಸಾಹೇಬರ ಹುಟ್ಟು ನಮ್ಮೆಲ್ಲರ ಹುಟ್ಟನ್ನು ಅರ್ಥಪೂರ್ಣಗೊಳಿಸಿತು ಎಂದಿದ್ದಾರೆ.

‘ಶತಮಾನಗಳ ಕಾಲ ಶಿಕ್ಷಣ, ಧಾರ್ಮಿಕ ಹಾಗೂ ಸಾಮಾಜಿಕ ಸ್ವಾತಂತ್ರ್ಯ ಮುಂತಾದವುಗಳಿಂದ ವಂಚಿತವಾಗಿದ್ದ ಕೋಟ್ಯಂತರ ಶೋಷಿತ ಜನರಿಗೆ ಸ್ವಾಭಿಮಾನ,‌ ಸ್ವಾವಲಂಬನೆ ಮತ್ತು ಘನತೆಯ ಬದುಕನ್ನು ನೀಡಿದ್ದು ಬಾಬಾ ಸಾಹೇಬರ ಸಂವಿಧಾನ.

ಮೌಢ್ಯ, ಕಂದಾಚಾರ, ಜಾತಿಯಾಧಾರಿತ ಅಸಮಾನತೆಗಳೇ ತುಂಬಿಹೋಗಿದ್ದ ಭಾರತೀಯ ಸಮಾಜದಲ್ಲಿ ಪರಿವರ್ತನೆಯ ಯುಗಕ್ಕೆ ಚಾಲನೆ ನೀಡಿದ ಬಾಬಾಸಾಹೇಬರ ಹುಟ್ಟುಹಬ್ಬವನ್ನು ಅವರ ಚಿಂತನೆಯ ಅರಿವಿನೊಂದಿಗೆ ಆಚರಿಸೋಣ. ಸಮಸ್ತ ಜನತೆಗೆ ಅಂಬೇಡ್ಕರ್ ಜಯಂತಿಯ ಶುಭಾಶಯಗಳು’ ಎಂದು ಸಂದೇಶ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments