Webdunia - Bharat's app for daily news and videos

Install App

ಯೂರಿಯಾ ಗೊಬ್ಬರ ಕೊಡಿ ಎಂದು ಕೇಂದ್ರ ಸಚಿವರಿಗೆ ಪತ್ರ ಬರೆದ ಸಿದ್ದರಾಮಯ್ಯ

Krishnaveni K
ಶುಕ್ರವಾರ, 25 ಜುಲೈ 2025 (14:28 IST)
ಬೆಂಗಳೂರು: ರಾಜ್ಯದಲ್ಲಿ ಸಾಕಷ್ಟು ಯೂರಿಯಾ ಗೊಬ್ಬರ ಸಿಗದೇ ರೈತರು ಪ್ರತಿಭಟನೆಯ ಹಾದಿ ಹಿಡಿದಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ.

ಕಳೆದ ಕೆಲವು ದಿನಗಳಿಂದ ರೈತರು ಸಾಕಷ್ಟು ಯೂರಿಯಾ ಗೊಬ್ಬರ ಸಿಗದೇ ರೊಚ್ಚಿಗೆದ್ದಿದ್ದಾರೆ. ಒಬ್ಬರಿಗೆ ನಾಲ್ಕು ಚೀಲ ಮಾತ್ರ ಯೂರಿಯಾ ಗೊಬ್ಬರ ಎನ್ನುತ್ತಿರುವುದು ರೈತರ ಸಿಟ್ಟಿಗೆ ಕಾರಣವಾಗಿದೆ. ಕೇಂದ್ರ ಸರ್ಕಾರದಿಂದ ಸಾಕಷ್ಟು ಪ್ರಮಾಣದಲ್ಲಿ ಯೂರಿಯಾ ಗೊಬ್ಬರ ಸಿಕ್ಕಿಲ್ಲ. ಅದಕ್ಕೇ ನಮಗೆ ಸಮಸ್ಯೆಯಾಗಿದೆ ಎಂದು ಎಪಿಎಂಸಿ ಸಚಿವ ಶಿವಾನಂದ ಪಾಟೀಲ್ ಹೇಳಿದ್ದರು.

ಹೀಗಾಗಿ ಕೇಂದ್ರ ರಸಗೊಬ್ಬರ ಖಾತೆ ಸಚಿವ ಜೆಪಿ ನಡ್ಡಾಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದು ಯೂರಿಯಾ ಗೊಬ್ಬರ ಒದಗಿಸುವಂತೆ ಮನವಿ ಮಾಡಿದ್ದಾರೆ. ಯೂರಿಯಾ ಗೊಬ್ಬರ ಕೊರತೆಯಿಂದ ಕರ್ನಾಟಕ ರೈತರಿಗೆ ತೀವ್ರ ತೊಂದರೆಯಾಗುತ್ತಿದೆ. ಏಪ್ರಿಲ್ ನಿಂದ ಮೇವರೆಗೆ ನಮಗೆ 6.8 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಅಗತ್ಯವಿದೆ. ಆದರೆ 5.1 ಲಕ್ಷ ಮೆಟ್ರಿಕ್ ಟನ್ ಗೊಬ್ಬರವಷ್ಟೇ ಪೂರೈಕೆಯಾಗಿದೆ. ಮಳೆಗಾಲದ ಆರಂಭದಲ್ಲಿ ರೈತರಿಗೆ ಬೆಳೆ ಬೆಳೆಯಲು ಯೂರಿಯಾ ಗೊಬ್ಬರ ಸಕಾಲದಲ್ಲಿ ಸಿಗದೇ ಹೋದರೆ ತೊಂದರೆಯಾಗುತ್ತದೆ. ಹೀಗಾಗಿ ನಮ್ಮ ರೈತರ ಹಿತದೃಷ್ಟಿಯಿಂದ ಕೇಂದ್ರ ಸಚಿವ ಜೆಪಿ ನಡ್ಡಾಗೆ ಇನ್ನೂ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಒದಗಿಸುವಂತೆ ಮನವಿ ಮಾಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೂರಿಯಾ ಗೊಬ್ಬರ ಕೊಡಿ ಎಂದು ಕೇಂದ್ರ ಸಚಿವರಿಗೆ ಪತ್ರ ಬರೆದ ಸಿದ್ದರಾಮಯ್ಯ

ಧರ್ಮಸ್ಥಳ ಕೇಸ್ ನಲ್ಲಿ ಮಹತ್ವದ ಹೆಜ್ಜೆಯಿಟ್ಟ ಎಸ್ಐಟಿ

ವಿಧಾನಸಭೆಯಲ್ಲಿ ಕಾಂಗ್ರೆಸ್ ಗೆದ್ದಿದ್ದು ಅಕ್ರಮದಿಂದನಾ: ಬಿವೈ ವಿಜಯೇಂದ್ರ

ಸರ್ಕಾರೀ ಅಧಿಕಾರಿಗಳೊಂದಿಗೆ ಸಭೆ ನಡೆಸಲು ರಣದೀಪ್ ಸುರ್ಜೇವಾಲಗೆ ಅಧಿಕಾರ ಕೊಟ್ಟಿದ್ಯಾರು: ಜೆಡಿಎಸ್

ಇಂದಿರಾ ಗಾಂಧಿ ದಾಖಲೆ ಮುರಿದ ಮೋದಿ ಹಾಡಿ ಹೊಗಳಿದ ವಿಜಯೇಂದ್ರ

ಮುಂದಿನ ಸುದ್ದಿ
Show comments