Webdunia - Bharat's app for daily news and videos

Install App

ದೆಹಲಿ ಫ್ಲೈಟ್ ನಲ್ಲಿ ನಡೆದಿತ್ತಾ ಬಿಜೆಪಿ-ಜೆಡಿಎಸ್ ಒಪ್ಪಂದ? ಸಿಎಂ ಸಿದ್ದರಾಮಯ್ಯ ಬಾಂಬ್

Webdunia
ಸೋಮವಾರ, 30 ಏಪ್ರಿಲ್ 2018 (07:52 IST)
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದರೆ ಜೆಡಿಎಸ್ ಜತೆಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲು ಬಿಜೆಪಿ ತಂತ್ರ ರೂಪಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಬಾಂಬ್ ಸಿಡಿಸಿದ್ದಾರೆ.

ಇದಕ್ಕಾಗಿ ದೆಹಲಿ ವಿಮಾನದಲ್ಲಿ ಅಮಿತ್ ಶಾ ಜತೆಗೆ ಜೆಡಿಎಸ್ ನಾಯಕರು ಗುಪ್ತ ಮಾತುಕತೆ ನಡೆಸಿದ್ದಾರೆ ಎಂದು ಸಿಎಂ ಬಾಂಬ್ ಹಾಕಿದ್ದಾರೆ. ಇದಕ್ಕೆ ಇದೀಗ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕೆರಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ‘ಸಿದ್ದರಾಮಯ್ಯಗೆ ಮಾಡಲು ಬೇರೆ ಕೆಲಸವಿಲ್ಲ. ಅಮಿತ್ ಶಾ ಏನು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೇ? ಅವರ ಜತೆ ನಾನೇಕೆ ವಿಮಾನದಲ್ಲಿ ಜತೆಯಾಗಿ ಪ್ರಯಾಣ ಮಾಡಲಿ? ಯಾವ ಆಧಾರದ ಮೇಲೆ ಸಿಎಂ ಇಂತಹ ಆರೋಪ ಮಾಡುತ್ತಾರೆ? ದಾಖಲೆ ಇದ್ದರೆ ತೋರಿಸಲಿ ನೋಡೋಣ’ ಎಂದು ಸವಾಲು ಹಾಕಿದ್ದಾರೆ.

ಅತ್ತ ಬಿಜೆಪಿ ಕೂಡಾ ಈ ಬಗ್ಗೆ ತಿರುಗೇಟು ನೀಡಿದೆ. ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿದ ಸಂಸದೆ ಶೋಭಾ ಕರಂದ್ಲಾಜೆ ‘ಹತಾಶೆಯಿಂದ ಸಿಎಂ ಏನೇನೋ ಮಾತಾಡ್ತಿದ್ದಾರೆ. ಸಿದ್ದರಾಮಯ್ಯ ಒಬ್ಬ ಹಿಟ್ ಆಂಡ್ ರನ್ ರಾಜಕಾರಣಿ. ನಾಚಿಕೆಯಾಗಬೇಕು ಅವರಿಗೆ ಇಂತಹ ಆರೋಪ ಮಾಡಲು. ಇಂತಹ ಆರೋಪ ಮಾಡಿದ್ದಕ್ಕೆ ಬೇಷರತ್ ಕ್ಷಮೆ ಯಾಚಿಸಲಿ’ ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

22ಅಡಿ ಎತ್ತರದ, 3000ಕೆಜಿ ತೂಕದ ಗಣೇಶ ವಿಗ್ರಹವನ್ನು ಸ್ವಾಗತಿಸುವ ವೇಳೆ ಇದೆಂಥಾ ದುರಂತ, ಇಬ್ಬರು ಸಾವು, Video

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ರಾಜ್ಯದ ಯಾವ ಭಾಗಕ್ಕೆ ಪ್ರಭಾವ ಬೀರಲಿದೆ ಗೊತ್ತಾ

ರೈಲಿನಲ್ಲಿ ಹೊದಿಕೆಗೆ ಬೆಡ್‌ಶೀಟ್‌ ಕೊಟ್ರೆ ಈ ಮೂವರು ಏನ್ ಮಾಡಿದ್ರು, ನೋಡಿ Video

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನಿವಾಸಕ್ಕೆ ಉದ್ಯಮಿ ಗೌತಮ್ ಅದಾನಿ ಭೇಟಿ: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಮಗುವಿಗೆ ಸಿರಪ್ ನೀಡುವ ವಿಚಾರದಲ್ಲಿ ದಂಪತಿ ನಡುವೆ ಜಗಳ, ಅಂತ್ಯವಾಗಿದ್ದು ಒಬ್ಬರ ಸಾವಿನಲ್ಲಿ

ಮುಂದಿನ ಸುದ್ದಿ
Show comments