Select Your Language

Notifications

webdunia
webdunia
webdunia
webdunia

ಐಪಿಎಸ್ ಅಧಿಕಾರಿಗಳ ವಿರುದ್ಧ ಸಿಎಂಗೆ ಇಷ್ಟೊಂದು ಕೋಪ ಬಂದಿದ್ದೇಕೆ?!

ಐಪಿಎಸ್ ಅಧಿಕಾರಿಗಳ ವಿರುದ್ಧ ಸಿಎಂಗೆ ಇಷ್ಟೊಂದು ಕೋಪ ಬಂದಿದ್ದೇಕೆ?!
ಬೆಂಗಳೂರು , ಸೋಮವಾರ, 12 ಮಾರ್ಚ್ 2018 (12:28 IST)
ಬೆಂಗಳೂರು: ಐಪಿಎಸ್ ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಅದಕ್ಕೆ ಕಾರಣ ರಾಜ್ಯ ಸರ್ಕಾರದ ವಿರುದ್ಧ ಮುಖ್ಯ ಕಾರ್ಯದರ್ಶಿಗೆ ಐಪಿಎಸ್ ಸಂಘದ ಅಧಿಕಾರಿಗಳು ಪತ್ರ ಬರೆದಿರುವುದು.

ರಾಜ್ಯದಲ್ಲಿ ಐಪಿಎಸ್ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ವಾತಾವರಣ ಸದ್ಯಕ್ಕಿಲ್ಲ ಎಂದು ಐಪಿಎಸ್ ಸಂಘದ ಮುಖ್ಯಸ್ಥ ಆರ್ ಪಿ ಶರ್ಮಾ ಬರೆದಿದ್ದಾರೆನ್ನಲಾದ ಪತ್ರ ಇದೀಗ ಸಿಎಂ ಪಿತ್ಥ ನೆತ್ತಿಗೇರಿಸಿದೆ. ಡಿಜಿಪಿ ನೀಲಮಣಿ ರಾಜು ಅವರಿಗೆ ಪತ್ರ ಬರೆದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಸಿಎಂ ಸೂಚಿಸಿದ್ದಾರೆ. ನಿಮ್ಮ ಸಮಸ್ಯೆಗಳನ್ನು ಹೇಳುವ ರೀತಿ ಇದಲ್ಲ ಎಂದು ಅವರು ಕಿಡಿ ಕಾರಿದ್ದಾರೆ ಎನ್ನಲಾಗಿದೆ.

ಈ ನಡುವೆ ಇದೇ ವಿಚಾರವಾಗಿ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದು ಸಿದ್ದರಾಮಯ್ಯ ಆಡಳಿತದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳಿಗೆ ಬೆಲೆ ಇಲ್ಲ ಎಂದು ಟೀಕಾಪ್ರಹಾರ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಶ್ಯಾಮನೂರು ಶಿವಶಂಕರಪ್ಪ-ಯಡಿಯೂರಪ್ಪ ರಹಸ್ಯ ಮಾತುಕತೆ