Select Your Language

Notifications

webdunia
webdunia
webdunia
webdunia

ಬಂಟ್ವಾಳದ ಬಿಸಿಗೆ ಶಾಕ್ ಹೊಡೆಸಿಕೊಂಡ ಸಿಎಂ ಸಿದ್ದರಾಮಯ್ಯ

ಬಂಟ್ವಾಳದ ಬಿಸಿಗೆ ಶಾಕ್ ಹೊಡೆಸಿಕೊಂಡ ಸಿಎಂ ಸಿದ್ದರಾಮಯ್ಯ
Bangalore , ಸೋಮವಾರ, 10 ಜುಲೈ 2017 (10:51 IST)
ಬೆಂಗಳೂರು: ಬಂಟ್ವಾಳದಲ್ಲಿ ನಡೆದ ಶರತ್ ಮಡಿವಾಳ ಪ್ರಕರಣದ ನಂತರ ಸಿಎಂ ಸಿದ್ದರಾಮಯ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಂಸಾಚಾರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

 
ಇಂದು ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಸಿಎಂ ಸಾಹೇಬರು, ದ.ಕ. ಜಿಲ್ಲೆಯ ಸದ್ಯದ ಪರಿಸ್ಥಿತಿ ಬಗ್ಗೆ ಚರ್ಚಿಸಲಿದ್ದಾರೆ. ಸಭೆಯಲ್ಲಿ ಪಾಲ್ಗೊಳ್ಳಲು ಈಗಾಗಲೇ ಸಿಎಂ ಸಿದ್ದರಾಮಯ್ಯ ಡಿಐಜಿ ಕಚೇರಿಗೆ ಆಗಮಿಸಿದ್ದಾರೆ.

ಅಷ್ಟೊಂದು ಉದ್ವಿಗ್ನ ಪರಿಸ್ಥಿತಿಯಿದ್ದರೂ, ಸಿಎಂ ಸಿದ್ದರಾಮಯ್ಯ ಮೌನವಾಗಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ವಿಪಕ್ಷಗಳ ಟೀಕೆಗೆ ಉತ್ತರ ಕೊಡುವಂತೆ ಸಿಎಂ ಸಿದ್ದರಾಮಯ್ಯ ಇಂದು ಅಲ್ಲಿನ ಕಾನೂನು ವ್ಯವಸ್ಥೆ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಸಭೆಯಲ್ಲಿ ಪಶ್ಚಿಮ ವಲಯ ಐಜಿಪಿ ಹರಿಶೇಖರನ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಪಾಲ್ಗೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಚೀನಾ ಬೆದರಿಕೆಗೆ ಬಗ್ಗದ ಭಾರತ: ಡೋಕ್ಲಾಮ್ ಗಡಿಯಲ್ಲಿ ಟೆಂಟ್ ಹಾಕಿದ ಸೇನೆ