Publish Date: Wed, 15 Nov 2017 (10:55 IST)
Updated Date: Wed, 15 Nov 2017 (10:57 IST)
ಬೆಂಗಳೂರು: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಶೇಷ ಅಧಿವೇಶನದಲ್ಲಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಗೆ ಸರಿಯಾಗಿ ಸೆಡ್ಡು ಹೊಡೆಯಲು ಸಿಎಂ ಸಿದ್ದರಾಮಯ್ಯ ತಮ್ಮ ಪಕ್ಷದ ಶಾಸಕರು ಮತ್ತು ಸಚಿವರಿಗೆ ಸೂಚನೆ ನೀಡಿದ್ದಾರೆ.
ಸದನ ಕಲಾಪಕ್ಕೆ ಮೊದಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯ ಸದನದಲ್ಲಿ ನಡೆದುಕೊಳ್ಳಬೇಕಾದ ವಿಚಾರಗಳ ಕುರಿತು ಪಾಠ ಮಾಡಿದ್ದಾರೆ.
ಬಿಜೆಪಿಯ ರಾಜ್ಯ, ರಾಷ್ಟ್ರರ ನಾಯಕರ ಮೇಲೂ ಹಲವು ಪ್ರಕರಣಗಳಿವೆ. ಬಿಜೆಪಿಯವರಿಗೆ ಈಗ ಬೇರೆ ವಿಚಾರಗಳಿಲ್ಲ. ಹಾಗಾಗಿ ಜಾರ್ಜ್ ವಿಚಾರಕ್ಕೆ ಗಲಾಟೆ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಒಗ್ಗಟ್ಟಾಗಿರೋಣ. ಬೆಳಗಾವಿಯಲ್ಲಿ ಈ ಸರ್ಕಾರದ ಕೊನೆಯ ಅಧಿವೇಶನವಿದು. ಎಲ್ಲರೂ ಕಲಾಪಕ್ಕೆ ಹಾಜರಾಗಿ, ವಿಪಕ್ಷಗಳಿಗೆ ಸರಿಯಾದ ಉತ್ತರ ಕೊಡುವಂತೆ ಸಭೆಯಲ್ಲಿ ಸಿಎಂ ಸೂಚನೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ