Select Your Language

Notifications

webdunia
webdunia
webdunia
webdunia

ಬಿವೈ ವಿಜಯೇಂದ್ರ ಬಗ್ಗೆ ಪ್ರಶ್ನೆಯನ್ನೇ ಕೇಳಬೇಡಿ ಎಂದುಬಿಟ್ರು ಸಿಎಂ ಸಿದ್ದರಾಮಯ್ಯ!

ಬಿವೈ ವಿಜಯೇಂದ್ರ ಬಗ್ಗೆ ಪ್ರಶ್ನೆಯನ್ನೇ ಕೇಳಬೇಡಿ ಎಂದುಬಿಟ್ರು ಸಿಎಂ ಸಿದ್ದರಾಮಯ್ಯ!
ಮೈಸೂರು , ಸೋಮವಾರ, 2 ಏಪ್ರಿಲ್ 2018 (11:42 IST)
ಮೈಸೂರು: ವರುಣಾ ಕ್ಷೇತ್ರದಲ್ಲಿ ತಮ್ಮ ಪುತ್ರ ಡಾ. ಯತೀಂದ್ರ ಎದುರು ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಸ್ಪರ್ಧೆ ಕುರಿತು ಪ್ರತಿಕ್ರಿಯಿಸಲು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದಾರೆ.

ಒಂದೆಡೆ ಬಿಜೆಪಿ ವರುಣಾದಲ್ಲಿ ಸಿಎಂ ಪುತ್ರನಿಗೆ ಸೋಲುಣಿಸಲು ರಣತಂತ್ರ ಹೆಣೆದಿದ್ದರೆ, ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಪ್ರತಿಕ್ರಿಯಿಸುವುದೂ ನನಗೆ ಇಷ್ಟವಿಲ್ಲ ಎಂದಿದ್ದಾರೆ.

‘ಯಾರು ಯಾವ ಕ್ಷೇತ್ರದಲ್ಲಿ ಬೇಕಾದರೂ ಸ್ಪರ್ಧೆ ಮಾಡಬಹುದು. ಹಾಲಿ, ಮಾಜಿ ಸಿಎಂಗಳ ಪುತ್ರರು ಎಂದು ವಿಶೇಷವೇನಿಲ್ಲ. ಬಿವೈ ವಿಜಯೇಂದ್ರ ಬಗ್ಗೆ ನನ್ನಲ್ಲಿ ಪ್ರಶ್ನೆಯನ್ನೇ ಕೇಳಬೇಡಿ’ ಎಂದು ಸಿಎಂ ಮಾಧ್ಯಮಗಳಿಗೆ ತಾಕೀತು ಮಾಡಿದ್ದಾರೆ.

ಇನ್ನೊಂದೆಡೆ ವಿಜಯೇಂದ್ರ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಇಂದು ನಾಡದೇವತೆ ಚಾಮುಂಡಿ ಕ್ಷೇತ್ರಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ವರುಣಾದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೇಂದ್ರ ಸ್ವಾಗತಕ್ಕೆ ಸಿದ್ಧತೆ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ, ಶಾ ಬಂದು ಮಾಟ ಮಂತ್ರ ಮಾಡಕ್ಕಾಗಲ್ಲ: ಸಿಎಂ ಸಿದ್ದರಾಮಯ್ಯ ಟಾಂಗ್