ಬಿವೈ ವಿಜಯೇಂದ್ರ ಬಗ್ಗೆ ಪ್ರಶ್ನೆಯನ್ನೇ ಕೇಳಬೇಡಿ ಎಂದುಬಿಟ್ರು ಸಿಎಂ ಸಿದ್ದರಾಮಯ್ಯ!

Webdunia
ಸೋಮವಾರ, 2 ಏಪ್ರಿಲ್ 2018 (11:42 IST)
ಮೈಸೂರು: ವರುಣಾ ಕ್ಷೇತ್ರದಲ್ಲಿ ತಮ್ಮ ಪುತ್ರ ಡಾ. ಯತೀಂದ್ರ ಎದುರು ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಸ್ಪರ್ಧೆ ಕುರಿತು ಪ್ರತಿಕ್ರಿಯಿಸಲು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದಾರೆ.

ಒಂದೆಡೆ ಬಿಜೆಪಿ ವರುಣಾದಲ್ಲಿ ಸಿಎಂ ಪುತ್ರನಿಗೆ ಸೋಲುಣಿಸಲು ರಣತಂತ್ರ ಹೆಣೆದಿದ್ದರೆ, ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಪ್ರತಿಕ್ರಿಯಿಸುವುದೂ ನನಗೆ ಇಷ್ಟವಿಲ್ಲ ಎಂದಿದ್ದಾರೆ.

‘ಯಾರು ಯಾವ ಕ್ಷೇತ್ರದಲ್ಲಿ ಬೇಕಾದರೂ ಸ್ಪರ್ಧೆ ಮಾಡಬಹುದು. ಹಾಲಿ, ಮಾಜಿ ಸಿಎಂಗಳ ಪುತ್ರರು ಎಂದು ವಿಶೇಷವೇನಿಲ್ಲ. ಬಿವೈ ವಿಜಯೇಂದ್ರ ಬಗ್ಗೆ ನನ್ನಲ್ಲಿ ಪ್ರಶ್ನೆಯನ್ನೇ ಕೇಳಬೇಡಿ’ ಎಂದು ಸಿಎಂ ಮಾಧ್ಯಮಗಳಿಗೆ ತಾಕೀತು ಮಾಡಿದ್ದಾರೆ.

ಇನ್ನೊಂದೆಡೆ ವಿಜಯೇಂದ್ರ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಇಂದು ನಾಡದೇವತೆ ಚಾಮುಂಡಿ ಕ್ಷೇತ್ರಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ವರುಣಾದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೇಂದ್ರ ಸ್ವಾಗತಕ್ಕೆ ಸಿದ್ಧತೆ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೈಲ ದರ ಹೆಚ್ಚಳದಿಂದ ಲಾಭ ಆಗ್ತಿರೋದೇ ರಾಜ್ಯಕ್ಕೆ: ಆರ್‌ ಅಶೋಕ್ ವಾಗ್ದಾಳಿ

ನಿನ್ನ ಮಗುಗೆ ಮೊಬೈಲ್ ಕೊಡಕ್ಕೆ ಹೇಳು ಎಂದಿದ್ದಕ್ಕೆ ಮರಿ ಕೋತಿಯ ಬಳಿ ತಾಯಿ ಕೋತಿ ಏನು ಮಾಡ್ತು ನೋಡಿ Video

ಮೃತ ಮಗಳಿಗಿಂತ ವಿಚ್ಛೇದಿತ ಮಗಳನ್ನೇ ಹೊಂದುವುದು ಉತ್ತಮ: ತ್ವಿಶಾ ಕೇಸ್‌ ಬಗ್ಗೆ ಸುಪ್ರೀಂ

ರಸ್ತೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ಪ್ರಾರ್ಥನೆಗೆ ಅವಕಾಶವಿಲ್ಲ: ಬಕ್ರೀದ್‌ಗೂ ಮುನ್ನಾ ಸಿಎಂ ಯೋಗಿ ಖಡಕ್ ರೂಲ್ಸ್‌

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮನೆಗೆ ಪೆಟ್ರೋಲ್ ಬಾಂಬ್ ಎಸೆದ ಯುವಕ: ಭಯಾನಕ Video

ಮುಂದಿನ ಸುದ್ದಿ
Show comments