Webdunia - Bharat's app for daily news and videos

Install App

ಶಶಿಕಲಾಗೆ ವಿಐಪಿ ಟ್ರೀಟ್ ಮೆಂಟ್ ಕೊಡಲು ಸಿಎಂ ಸಿದ್ದರಾಮಯ್ಯನವರೇ ಸೂಚಿಸಿದ್ರಾ?! ಸಿಎಂ ಹೇಳಿದ್ದೇನು?

Webdunia
ಬುಧವಾರ, 7 ಮಾರ್ಚ್ 2018 (12:31 IST)
ಬೆಂಗಳೂರು: ಅಕ್ರಮ ಆಸ್ಥಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ  ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಗೆ ವಿಐಪಿ ಟ್ರೀಟ್ ಮೆಂಟ್ ನೀಡಲು ಸ್ವತಃ ಸಿಎಂ ಸೂಚಿಸಿದ್ರಾ?

ಈ ಬಗ್ಗೆ ತನಿಖಾಧಿಕಾರಿಗಳ ಮುಂದೆ ಡಿಜಿಪಿ ಸತ್ಯನಾರಾಯಣ ರಾವ್ ನೀಡಿದ ಹೇಳಿಕೆ ವಿವಾದಕ್ಕೀಡುಮಾಡಿದೆ. ಶಶಿಕಲಾಗೆ ಜೈಲಿನಲ್ಲಿ ವಿಐಪಿ ಆತಿಥ್ಯ ನೀಡಲಾಗುತ್ತಿದೆ ಎಂಬ ಆರೋಪಗಳ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ನಿಯೋಜಿಸಿತ್ತು. ಈ ಬಗ್ಗೆ ಡಿಜಿಪಿಯವರನ್ನು ವಿಚಾರಣೆ ನಡೆಸಿದಾಗ ಸಿಎಂ ಸೂಚನೆಯಂತೆ ಶಶಿಕಲಾಗೆ ಹಾಸಿಗೆ ದಿಂಬು ನೀಡಲಾಗುತ್ತಿದೆ ಎಂದಿದ್ದರು.

ಈ ಬಗ್ಗೆ ಇದೀಗ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ‘ತಮಿಳುನಾಡಿನಿಂದ ಬಂದ ನಿಯೋಗವೊಂದು ನನ್ನ ಬಳಿ ಶಶಿಕಲಾಗೆ ಕನಿಷ್ಠ ಸೌಲಭ್ಯವನ್ನೂ ಜೈಲಿನಲ್ಲಿ ನೀಡಲಾಗಿಲ್ಲ ಎಂದಿತ್ತು. ಹೀಗಾಗಿ ಡಿಜಿಪಿ ಸತ್ಯನಾರಾಯಣ ರಾವ್ ರನ್ನು ಕರೆದು ಜೈಲಿನ ಮ್ಯಾನ್ಯುವಲ್ ಪ್ರಕಾರ ಏನು ಸೌಲಭ್ಯ ಕೊಡಬಹುದೋ ಅದನ್ನು ಕೊಡಬಹುದು ಎಂದಿದ್ದೆ ಅಷ್ಟೇ. ವಿಶೇಷ ಸೌಲಭ್ಯ ಕೊಡಿ ಎಂದಿಲ್ಲ’ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments