Webdunia - Bharat's app for daily news and videos

Install App

‘ಸದ್ಯಕ್ಕೆ ಮೋದಿಗೆ ಸರಿಸಮ ಸಿದ್ದರಾಮಯ್ಯ, ಮುಂದೆ ಅವರೇ ಪ್ರಧಾನಿ ಆಗಲಿ’

Webdunia
ಶುಕ್ರವಾರ, 9 ಫೆಬ್ರವರಿ 2018 (16:19 IST)
ಬೆಂಗಳೂರು: ದೇಶದಲ್ಲಿ ಸದ್ಯಕ್ಕೆ ಮೋದಿಗೆ ಸರಿಸಮರಾದ ನಾಯಕರೆಂದರೆ ಸಿಎಂ ಸಿದ್ದರಾಮಯ್ಯ. ಮುಂದೊಂದು ದಿನ ಅವರೇ ದೇಶದ ಪ್ರಧಾನಿ ಆಗಲಿ. ಕರಿಕೋಟು ಹಾಕಿಕೊಂಡು ಕೆಂಪುಕೋಟೆಯಲ್ಲಿ ಧ್ವಜ ಹಾರಿಸುವುದಾದರೆ ನಾವೆಲ್ಲಾ ಬೆಂಬಲಿಸೋಣ ಎಂದು ಕನಕಗುರು ಪೀಠಾಧ್ಯಕ್ಷ ನಿರಂಜನಾನಂದ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಪ್ರಧಾನಿ ಆಗುವ ಶಕ್ತಿಯಿದೆ. ಮುಂದೊಂದು ದಿನ ಅವರೇ ಏಕೆ ಪ್ರಧಾನಿ ಆಗಬಾರದು? ಅವರಿಗೆ ಆ ಸಾಮರ್ಥ್ಯವಿದೆ. ಅವರ ಒಳ್ಳೆ ಕೆಲಸದಿಂದ ಮುಂದೊಂದು ದಿನ ಅವರು ಆ ಹುದ್ದೆಗೇರಿದರೆ ನಾವೆಲ್ಲಾ ಬೆಂಬಲಿಸೋಣ ಎಂದು ಸ್ವಾಮೀಜಿ ತಮ್ಮ ಸಮುದಾಯದವರಿಗೆ ಕರೆಕೊಟ್ಟಿದ್ದಾರೆ.

ಒಂದೆಡೆ ಸ್ವಾಮೀಜಿ ಈ ರೀತಿ ಹೇಳಿಕೆ ನೀಡಿದರೆ ಇನ್ನೊಂದೆಡೆ ಸ್ವತಃ ಸಿಎಂ ಸಿದ್ದರಾಮಯ್ಯ ಕೂಡಾ ಪರೋಕ್ಷವಾಗಿ ತಮ್ಮ ಪ್ರಧಾನಿ ಪಟ್ಟದ ಗುರಿ ಹಂಚಿಕೊಂಡಿದ್ದಾರೆ. ‘ಮೋದಿಗೆ ಕರ್ನಾಟಕವನ್ನು ಗೆಲ್ಲುವುದು ಗುರಿಯಾದರೆ, ನಮಗೆ ದೇಶವೇ ಟಾರ್ಗೆಟ್’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈ ಮೂಲಕ ಪರೋಕ್ಷವಾಗಿ ಸಿಎಂ ತಮ್ಮ ಪ್ರಧಾನಿ ಪಟ್ಟದ ಮೇಲಿರುವ ಆಸೆಯನ್ನು ಸೂಚಿಸಿದರು ಎಂದೇ ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments