Select Your Language

Notifications

webdunia
webdunia
webdunia
webdunia

ಸಂವಿಧಾನ ಇಲ್ಲದೇ ಹೋಗಿದ್ದರೆ ನಾನು ಕುರಿ ಮೇಯಿಸ್ತಿದ್ದೆ ಎಂದ ಸಿಎಂ ಸಿದ್ದರಾಮಯ್ಯ!

ಸಂವಿಧಾನ ಇಲ್ಲದೇ ಹೋಗಿದ್ದರೆ ನಾನು ಕುರಿ ಮೇಯಿಸ್ತಿದ್ದೆ ಎಂದ ಸಿಎಂ ಸಿದ್ದರಾಮಯ್ಯ!
ಬೆಂಗಳೂರು , ಭಾನುವಾರ, 15 ಏಪ್ರಿಲ್ 2018 (08:29 IST)
ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ಜಯಂತಿ ಪ್ರಯುಕ್ತ ಟ್ವಿಟರ್ ನಲ್ಲಿ ಸಂದೇಶ ಬರೆದಿರುವ ಸಿಎಂ ಸಿದ್ದರಾಮಯ್ಯ ಸಂವಿಧಾನ ಇಲ್ಲದೇ ಇದ್ದಿದ್ದರೆ ಕುರಿ ಮೇಯಿಸ್ತಿದ್ದೆ ಎಂದಿದ್ದಾರೆ.

ಬಾಬಾ ಸಾಹೇಬರು ರಚಿಸಿದ್ದ ಸಂವಿಧಾನ ಇಲ್ಲದೇ ಹೋಗಿದ್ದರೆ ನಾನು ಹಳ್ಳಿಯಲ್ಲಿ ದನ-ಕುರಿ ಮೇಯಿಸಿಕೊಂಡು ಉಳಿದು ಬಿಡುತ್ತಿದ್ದೆನೇನೋ? ನನ್ನಲ್ಲಿ ಸಾಮಾಜಿಕ ನ್ಯಾಯದ ಬದ್ಧತೆ, ಹೋರಾಟದ ಕಿಚ್ಚು ಮತ್ತು ಭವಿಷ್ಯದ ಬಗ್ಗೆ ಭರವಸೆ ಹುಟ್ಟಿಸಿದ್ದು ಅಂಬೇಡ್ಕರ್. ನನ್ನ ರಾಜಕೀಯ ಬದುಕು ಅಂಬೇಡ್ಕರ್ ಚಿಂತನೆಯ ಫಲ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಅಷ್ಟೇ ಅಲ್ಲ, ಅಂಬೇಡ್ಕರ್ ಬಗ್ಗೆ, ದಲಿತರ ಬಗ್ಗೆ ಪ್ರಧಾನಿ ಮೋದಿ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೊಗಳಿದ ಹೇಳಿಕೆಯನ್ನು ಸಿಎಂ ಪರೋಕ್ಷವಾಗಿ ಟೀಕಿಸಿದ್ದಾರೆ. ಸಂವಿಧಾನವನ್ನೇ ಬದಲಿಸುವ ಮಾತನಾಡುವವರ ಬಾಯಲ್ಲಿ ಎಂತಹಾ ಮಾತು ಬರುತ್ತಿದೆ ಎಂದು ಸಿಎಂ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ತನ್ನ ರಾಷ್ಟ್ರೀಯತೆಯ ಬಗ್ಗೆ ಪ್ರಶ್ನಿಸಿದವರಿಗೆ ಖಡಕ್ ಉತ್ತರ ನೀಡಿದ ಟೆನಿಸ್ ತಾರೆ ಸಾನಿಯಾ ಮಿರ್ಜಾ