Select Your Language

Notifications

webdunia
webdunia
webdunia
webdunia

‘ಮಠ ಕಟ್ಕೊಂಡು ನಾನೇನು ಮಾಡ್ಲಿ?’

ಸಿಎಂ ಸಿದ್ದರಾಮಯ್ಯ
ಬೆಂಗಳೂರು: ‘ಮಠಗಳನ್ನು ಕಟ್ಕೊಂಡು ನಾನೇನು ಮಾಡ್ಲಿ?’ ಮಠಗಳನ್ನು ಸುಪರ್ದಿಗೆ ತೆಗೆದುಕೊಳ್ಳುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದು ಹೀಗೆ.
 

ಈ ವಿಚಾರ ವಿವಾದವಾಗುತ್ತಿದ್ದಂತೆ ಸರ್ಕಾರ ಸುತ್ತೋಲೆ ಹಿಂಪಡೆದಿತ್ತು. ಈ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಸಿಎಂ ಸಿದ್ದರಾಮಯ್ಯ ಇದು ನಮ್ಮ ಸರ್ಕಾರದ ನಿರ್ಧಾರವಲ್ಲ ಎಂದಿದ್ದಾರೆ.

‘ಈ ಪ್ರಸ್ತಾಪ ಎಚ್ ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲೇ ಬಂದಿತ್ತು. ಹೀಗಾಗಿ ಇದು ನಾವು ಮಾಡಿದ ವಿಚಾರವಲ್ಲ. ಈಗ ನಮ್ಮ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಮಠಗಳನ್ನು ಸುಪರ್ದಿಗೆ ತೆಗೆದುಕೊಂಡು ನಾನೇನು ಮಾಡ್ಲಿ?’ ಎಂದು ಸಿಎಂ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ಸರ್ಕಾರದ ವಿರುದ್ಧ ನಟ ಚೇತನ್ ವಾಗ್ದಾಳಿ