Webdunia - Bharat's app for daily news and videos

Install App

‘ಕೃಷ್ಣ ಮಠಕ್ಕೆ ನನ್ನನ್ನು ಯಾರೂ ಕರೆದಿಲ್ಲ, ಅದಕ್ಕೇ ಹೋಗಿಲ್ಲ’ ಸಿಎಂ ಸ್ಪಷ್ಟನೆ

Webdunia
ಸೋಮವಾರ, 20 ನವೆಂಬರ್ 2017 (09:20 IST)
ಮಂಗಳೂರು: ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮಕ್ಕೆ ನಿನ್ನೆ ಉಡುಪಿಗೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಕೃಷ್ಣಮಠಕ್ಕೆ ಭೇಟಿ ಕೊಡದೇ ಇರುವುದರ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
 

ಐದನೇ ಬಾರಿ ಉಡುಪಿಗೆ ಭೇಟಿ ನೀಡಿದ್ದರೂ ಒಮ್ಮೆಯೂ ಕೃಷ್ಣಮಠಕ್ಕೆ ಹೋಗದಿರುವ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ ಪ್ರತಿಕ್ರಿಯಿಸಿದ ಸಿಎಂ ‘ನನ್ನನ್ನು ಯಾರೂ ಕೃಷ್ಣಮಠಕ್ಕೆ ಕರೆದಿರಲಿಲ್ಲ. ಅದಕ್ಕೇ ಹೋಗಿರಲಿಲ್ಲ’ ಎಂದಿದ್ದಾರೆ.

‘ನಾನು ಕೃಷ್ಣ ಮತ್ತು ಈಶ್ವರನ ಭಕ್ತ. ಕೃಷ್ಣ ಮಠಕ್ಕೆ ಹಿಂದೆ ಹೋಗಿದ್ದೆ. ಈಗ ಯಾರೂ ಕರೆದಿಲ್ಲ. ಅದಕ್ಕೇ ಹೋಗಲಿಲ್ಲ. ಉದ್ದೇಶಪೂರ್ವಕವಾಗಿ ಹೋಗಲಿಲ್ಲ, ಮಠದೊಂದಿಗೆ ಮನಸ್ತಾಪವಿದೆ ಎಂಬುದೆಲ್ಲಾ ಸುಳ್ಳು’ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಅಷ್ಟಕ್ಕೂ ದೇವಸ್ಥಾನಕ್ಕೆ ಹೋಗುವುದು ಬಿಡುವುದು ಅವರವರ ವಿವೇಚನೆಗೆ ಬಿಟ್ಟಿದ್ದು ಎಂದು ಸಿಎಂ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments