Publish Date: Tue, 24 Apr 2018 (08:32 IST)
Updated Date: Tue, 24 Apr 2018 (08:33 IST)
ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರ ಮಾಡುವಂತೆ ನಟ ಸುದೀಪ್ ಗೆ ಜೆಡಿಎಸ್, ಕಾಂಗ್ರೆಸ್ ಗಾಳ ಹಾಕಿತ್ತು. ತಾವು ಸುದೀಪ್ ಬಳಿ ಪ್ರಚಾರಕ್ಕೆ ಬರುವಂತೆ ಕೇಳಿಕೊಂಡಿದ್ದು ನಿಜ ಎಂದು ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ.
ನಟ ಸುದೀಪ್ ಜತೆ ಮಾತುಕತೆ ನಡೆಸಿದ್ದೇನೆ. ಆದರೆ ಅವರು ಪ್ರಚಾರಕ್ಕೆ ಬರುತ್ತಾರೋ ಇಲ್ಲವೋ ಎಂಬುದು ಗೊತ್ತಿಲ್ಲ ಎಂದು ಸಿಎಂ ಮಾಧ್ಯಮಗಳೊಂದಿಗೆ ಹೇಳಿಕೊಂಡಿದ್ದಾರೆ.
ಆದರೆ ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರಕ್ಕೆ ತನ್ನ ಪುತ್ರ ಯತೀಂದ್ರನೇ ಸ್ಟಾರ್ ಪ್ರಚಾರಕ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾದಲ್ಲಿ ಮಾತ್ರವಲ್ಲದೆ, ಚಾಮುಂಡೇಶ್ವರಿಯಲ್ಲೂ ಯತೀಂದ್ರ ಪ್ರಚಾರ ನಡೆಸಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.