ಇದೇ ಕೊನೆಯ ಬಾರಿ ಒಮ್ಮೆ... ಎನ್ನುತ್ತಾ ಭಾವುಕರಾದ ಸಿಎಂ ಸಿದ್ದರಾಮಯ್ಯ!

Webdunia
ಶುಕ್ರವಾರ, 11 ಮೇ 2018 (09:10 IST)
ಬೆಂಗಳೂರು: ಮೂರು ದಶಕಗಳ ಹಿಂದೆ ಇದೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ರಾಜಕೀಯ ಜೀವನ ಆರಂಭಿಸಿದೆ. ಈಗ ಅಲ್ಲಿಯೇ ಕೊನೆಯ ಬಾರಿಗೊಮ್ಮೆ ಆಶೀರ್ವದಿಸಿ ಎಂದು ಸಿಎಂ ಸಿದ್ದರಾಮಯ್ಯ ಭಾವುಕರಾಗಿ ಟ್ವೀಟ್ ಮಾಡಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರ ಮತ್ತು ಬಾದಾಮಿ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದರೂ, ಸಿಎಂ ಸಿದ್ದರಾಮಯ್ಯ, ಚಾಮುಂಡೇಶ್ವರಿ ಬಗ್ಗೆ ಹೆಚ್ಚು ಒಲವು ಬೆಳೆಸಿಕೊಂಡಿದ್ದಾರೆ. ಇದಕ್ಕೆ ಕಾರಣ ಸಿಎಂ ಸಿದ್ದರಾಮಯ್ಯರ ಮೊದಲ ಕ್ಷೇತ್ರ ಇದು ಎಂಬುದು.

ಇದೇ ಕಾರಣಕ್ಕೆ ಟ್ವೀಟ್ ಮಾಡಿರುವ ಅವರು ‘ಚಾಮುಂಡೇಶ್ವರಿಯ ಜನರನ್ನು ಭೇಟಿ ಮಾಡುವಾಗ ಪ್ರತೀ ಬಾರಿಯೂ ನನ್ನಲ್ಲಿ ಅಭಿಮಾನ ಉಕ್ಕುತ್ತದೆ. ಇದು ನನ್ನ ಕರ್ಮಭೂಮಿ, ಮೂರು ದಶಕಗಳ ಹಿಂದೆ ರಾಜಕೀಯ ಜೀವನ ಪ್ರಾರಂಭವಾಗಿದ್ದೇ ಇಲ್ಲಿಂದ. ಇದೀಗ ಕೊನೆಯ ಬಾರಿಗೊಮ್ಮೆ ನಿಮ್ಮ ಆಶೀರ್ವಾದ ಬೇಡುತ್ತಿದ್ದೇನೆ’ ಎಂದು ಸಿಎಂ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿ ಖಮೇನಿ ಸಾವಿನ ಬಳಿಕ ಕೋಮಾಕ್ಕೆ ಜಾರಿದ ಪತ್ನಿ ಕೂಡಾ ಇನ್ನಿಲ್ಲ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments