Publish Date: Sun, 18 Feb 2018 (12:33 IST)
Updated Date: Sun, 18 Feb 2018 (12:34 IST)
ಬೆಂಗಳೂರು: ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ನೀಡುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಸಾವಿರಾರು ಕೋಟಿ ರೂ. ವಂಚನೆ ಮಾಡಿ ವಿದೇಶಕ್ಕೆ ಹಾರಿದ ನೀರವ್ ಮೋದಿ ಬಗ್ಗೆ ಪ್ರಧಾನಿ ಮೋದಿ ಮಾತನಾಡಬೇಕು. ನೀವು ಅವರನ್ನೇ ಕೇಳಬೇಕು. ಆದರೆ ಅವರು ಮಾಧ್ಯಮಗಳ ಕೈಗೆ ಸಿಗುವುದೇ ಇಲ್ವಲ್ಲಾ? ಮತ್ತೆ ಪ್ರಶ್ನೆ ಕೇಳುವ ಅವಕಾಶ ಎಲ್ಲಿಂದ?’ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಇಂದು ರಾತ್ರಿ ಪ್ರಧಾನಿ ಮೋದಿ ಮೈಸೂರಿಗೆ ಬಂದಿಳಿಯಲಿದ್ದಾರೆ. ನಾಳೆ ರೈಲ್ವೇ ಮತ್ತು ಹೆದ್ದಾರಿ ಯೋಜನೆಗಳಿಗೆ ಅವರು ಚಾಲನೆ ನೀಡಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ