Publish Date: Thu, 12 Oct 2017 (11:06 IST)
Updated Date: Thu, 12 Oct 2017 (11:07 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಆಪ್ತ ಸಚಿವರ ಬಳಗ ದೆಹಲಿಯತ್ತ ಪ್ರಯಾಣ ಬೆಳೆಸಿದೆ. ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿಯಾಗಲಿರುವ ಸಿಎಂ ನಂತರ ಕಾಂಗ್ರೆಸ್ ಹೈಕಮಾಂಡ್ ಜತೆ ಚರ್ಚಿಸಲಿದ್ದಾರೆ.
ದೆಹಲಿಯಲ್ಲಿ ಇಂಧನ ಸಚಿವರನ್ನು ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯಗೆ ರಾಜ್ಯ ಇಂಧನ ಸಚಿವ ಡಿಕೆ ಶಿವಕುಮಾರ್ ಸಾಥ್ ನೀಡಲಿದ್ದಾರೆ. ಡಿಕೆಶಿ ನಿನ್ನೆಯೇ ದೆಹಲಿಗೆ ಪ್ರಯಾಣ ಬೆಳೆಸಿದ್ದು, ಸಿಎಂ ಸಿದ್ದರಾಮಯ್ಯ ಜತೆಗೆ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್, ದಿನೇಶ್ ಗುಂಡೂರಾವ್ ಸಾಥ್ ನೀಡಿದ್ದಾರೆ.
ಮುಂಬರುವ ಚುನಾವಣೆ ಕುರಿತಾಗಿ ರಾಹುಲ್ ಗಾಂಧಿ ಜತೆ ಸಿಎಂ ಮತ್ತು ಬಳಗ ಚರ್ಚೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ಕೂಡಾ ಜತೆಯಲ್ಲಿರಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ