Select Your Language

Notifications

webdunia
webdunia
webdunia
webdunia

ಟಿಕೆಟ್ ಅಸಮಾಧಾನಗಳ ನಡುವೆ ಮೈಸೂರಿಗೆ ಹಾರಿದ ಸಿಎಂ ಸಿದ್ದರಾಮಯ್ಯ

ಟಿಕೆಟ್ ಅಸಮಾಧಾನಗಳ ನಡುವೆ ಮೈಸೂರಿಗೆ ಹಾರಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು , ಸೋಮವಾರ, 16 ಏಪ್ರಿಲ್ 2018 (09:26 IST)
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಅಸಮಾಧಾನವೂ ಜೋರಾಗಿದೆ. ಈ ನಡುವೆ ಹಲವು ಅತೃಪ್ತ ನಾಯಕರು ಸಿಎಂ ಸಿದ್ದರಾಮಯ್ಯ ಭೇಟಿಗೆ ಆಗಮಿಸುತ್ತಿದ್ದಾರೆ.

ಆದರೆ ಸಿಎಂ ಸಿದ್ದರಾಮಯ್ಯ ಇಂದು ಮೈಸೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಅಧಿಕೃತ ನಿವಾಸಕಾವೇರಿಯಿಂದ ಹೊರಟ ಸಿಎಂ ಸಿದ್ದರಾಮಯ್ಯ ಎಚ್ ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ತೆರಳಲಿದ್ದಾರೆ.

ಇಂದಿನಿಂದ ಐದು ದಿನಗಳ ಕಾಲ ತಮ್ಮ ಸ್ವ ಕ್ಷೇತ್ರ ಚಾಮುಂಡೇಶ್ವರಿ ಹಾಗೂ ಪುತ್ರ ಯತೀಂದ್ರ ಸ್ಪರ್ಧಿಸುವ ವರುಣಾದಲ್ಲಿ ಸಿಎಂ ಭರ್ಜರಿ ಪ್ರಚಾರ ನಡೆಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ನೀವು ನಂಗೆ ಮೋಸ ಮಾಡಿಬಿಟ್ರಿ! ಸಿಎಂ ಸಿದ್ದರಾಮಯ್ಯಗೆ ಶಾಸಕ ಚಿಮ್ಮನಕಟ್ಟಿ ಆರೋಪ