Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯ ಮಲೆಮಹದೇಶ್ವರ ಸ್ವಾಮಿ ಪ್ರೀತಿ!

ಸಿಎಂ ಸಿದ್ದರಾಮಯ್ಯ ಮಲೆಮಹದೇಶ್ವರ ಸ್ವಾಮಿ ಪ್ರೀತಿ!
ಮೈಸೂರು , ಗುರುವಾರ, 11 ಜನವರಿ 2018 (08:29 IST)
ಮೈಸೂರು: ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಆಗಾಗ ದೇವಾಲಯಗಳಿಗೆ ಭೇಟಿ ಕೊಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಇದು ವಿಪಕ್ಷಗಳ ಟೀಕೆಗೂ ಕಾರಣವಾಗಿದೆ. ಅದೇನೇ ಇರಲಿ, ಇಂದು ಬೆಳ್ಳಂ ಬೆಳಿಗ್ಗೆ ಸಿಎಂ ಮಲೆಮಹದೇಶ್ವರ ಸ್ವಾಮಿ ದರ್ಶನ ಪಡೆದಿದ್ದಾರೆ.
 

ನಿನ್ನೆ ರಾತ್ರಿಯೇ ಕೊಳ್ಳೇಗಾಲ ತಾಲೂಕಿನ ಪ್ರಸಿದ್ಧ ಮಲೆಮಹದೇಶ್ವರ ಬೆಟ್ಟಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಇಲ್ಲಿಯೇ ಉಳಕೊಂಡು ಇಂದು ಬೆಳಿಗ್ಗೆ ಸ್ವಾಮಿಯ ದರ್ಶನ ಪಡೆದರು.

ಇದಾದ ಬಳಿಕ ಹೆಲಿಕಾಪ್ಟರ್ ಮಾರ್ಗವಾಗಿ ಸಿಎಂ, ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕು ಸರಗೂರಿಗೆ ತೆರಳಲಿದ್ದಾರೆ. ಇಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಜನ ಬಯಸುವವರಿಗೆ ಟಿಕೆಟ್ ಎಂದ ಜಿ.ಪರಮೇಶ್ವರ್