Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
Bangalore , ಸೋಮವಾರ, 3 ಜುಲೈ 2017 (17:04 IST)
ಬೆಂಗಳೂರು: ಸಾಲ ಮನ್ನಾ ವಿಚಾರಕ್ಕೆ ಸಂಬಂಧಿಸಿದ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರೆ ಬರೆದಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲಮನ್ನಾ ಮಾಡಲು ಮನವಿ ಮಾಡಿದ್ದಾರೆ.


ಸಹಕಾರಿ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿದ್ದೇವೆ. ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಹೆಚ್ಚಿನ ಸಾಲವಿದೆ.  ಹಾಗಾಗಿ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡುವುದರ ಬಗ್ಗೆ ಕೇಂದ್ರ ಸರ್ಕಾರ ವಿಚಾರ ಮಾಡಬೇಕು ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಮೊದಲು ಸಾಲ ಮನ್ನಾ ಕುರಿತು ವಿಪಕ್ಷಗಳು ಗದ್ದಲವೆಬ್ಬಿಸುವಾಗಲೆಲ್ಲಾ ಸಿಎಂ ಕೇಂದ್ರ ಮೊದಲು ಸಾಲ ಮನ್ನಾ ಮಾಡಲಿ ಎನ್ನುತ್ತಿದ್ದರು. ಕೊನೆಗೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ರಾಜ್ಯಕ್ಕೆ ಬಂದು ಹೋದ ಮೇಲೆ ಅಳೆದು ತೂಗಿ 50 ಸಾವಿರದವರೆಗಿನ ಅಲ್ಪಾವಧಿ ಸಾಲವನ್ನು ರಾಜ್ಯ ಸರ್ಕಾರ ಮನ್ನಾ ಮಾಡಿತ್ತು.

ಇದೀಗ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿರುವ ಸಾಲ ಮನ್ನಾ ಮಾಡಬೇಕಾದರೆ ಕೇಂದ್ರದ ನೆರವು ಬೇಕು. ಆದರೆ ಕೇಂದ್ರ ಮೊದಲಿನಿಂದಲೂ ಸಾಲ ಮನ್ನಾ ವಿಚಾರ ಸಾಧ್ಯವೇ ಇಲ್ಲ ಎನ್ನುತ್ತಿದೆ. ಈ ಹಿನ್ನಲೆಯಲ್ಲಿ ಸಿಎಂ ಬರೆದ ಪತ್ರಕ್ಕೆ ಕೇಂದ್ರ ಯಾವ ರೀತಿ ಪ್ರತಿಕ್ರಿಯಿಸುತ್ತದೆ ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಅನಗತ್ಯ ಪಿಐಎಲ್ ಜತೆ ಕೋರ್ಟ್ ಸಮಯ ವ್ಯರ್ಥ: ಟಿ ಜೆ ಅಬ್ರಾಹಂ ಗೆ 25 ಲಕ್ಷ ದಂಡ