Webdunia - Bharat's app for daily news and videos

Install App

ಸಿಎಂ ಹೇಳಿಕೆಯಿಂದ ತುಂಬಾ ನೋವಾಗಿದೆ ಎಂದ ಶಾಸಕ ಮೊಹಿನುದ್ದಿನ್ ಬಾವಾ

Webdunia
ಮಂಗಳವಾರ, 31 ಮೇ 2016 (16:20 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ತರಾಟೆಗೆ ತೆಗೆದುಕೊಂಡಿದ್ದರಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ ಎಂದು ಕಾಂಗ್ರೆಸ್ ಶಾಸಕ ಮೊಹಿನುದ್ದಿನ್ ಬಾವಾ ಹೇಳಿದ್ದಾರೆ. 
 
ಮೊಹಿನುದ್ದಿನ್ ಬಾವಾ ಅವರ ಸಹೋದರ ಬಿ.ಎ.ಫಾರೂಖ್ ಜೆಡಿಎಸ್ ಪಕ್ಷದಿಂದ ರಾಜ್ಯಸಭೆ ಚುನಾವಣೆಗೆ ಸ್ಪರ್ಧೆ ಮಾಡುತ್ತಿರುವುದರಿಂದ ಕೋಪಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಕ್ಷದ ಶಾಸಕಾಂಗ ಸಭೆಯಲ್ಲಿ ಮೊಹಿನುದ್ದಿನ್ ಬಾವಾ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು.
 
ಮುಖ್ಯಮಂತ್ರಿಯವರ ವರ್ತನೆಯಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ಇದರಿಂದ ನನ್ನ ಕ್ಷೇತ್ರದ ಜನರಲ್ಲಿ ನಾವು ಮುಖ್ಯಮಂತ್ರಿ ಅವರ ಬಳಿ ಹೋಗಿ ನಮ್ಮ ವೈಯಕ್ತಿಕ ಕೆಲಸಗಳನ್ನು ಮಾತ್ರ ಮಾಡಿಸಿಕೊಳ್ಳುತ್ತೇವೆ ಎನ್ನುವ ತಪ್ಪು ಸಂದೇಶ ರವಾನೆಯಾಗುತ್ತಿದೆ ಎಂದು ಮೊಹಿನುದ್ದಿನ್ ಬಾವಾ ಬೇಸರ ವ್ಯಕ್ತಪಡಿಸಿದರು.
 
ವೈಯಕ್ತಿಕ ಕೆಲಸಕ್ಕಾಗಿ ನಾನು ಅಥವಾ ನನ್ನ ಕುಟುಂಬ ಸದಸ್ಯರು ಎಂದೂ ಮುಖ್ಯಮಂತ್ರಿ ಅವರ ಬಳಿ ತೆರಳಿಲ್ಲ. ಪಕ್ಷದ ಕುರಿತು ಚರ್ಚೆ ನಡೆಸಲು ಮಾತ್ರ ಅವರ ಬಳಿ ಹೋಗುತ್ತಿದ್ದೇವು. ಆದರೆ, ಮುಖ್ಯಮಂತ್ರಿಯವರು ವೈಯಕ್ತಿಕ ಕೆಲಸಕ್ಕಾಗಿ ನಿನ್ನ ಸಹೋದರನನ್ನು ನನ್ನ ಬಳಿ ಕರೆತಂದಿರಲಿಲ್ಲವೇ ಎಂದು ಪ್ರಶ್ನಿಸಿದ್ದರು.
 
ನಾನು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ. ರಾಜ್ಯಸಭೆಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನೇ ಬೆಂಬಲಿಸುತ್ತೇನೆ. ನನ್ನ ರಾಜಕೀಯ ಜೀವನ ಮತ್ತು ನನ್ನ ತಮ್ಮನ ರಾಜಕೀಯ ಜೀವನಕ್ಕೆ ಸಂಬಂಧವಿಲ್ಲ ಎಂದು ಮೊಹಿನುದ್ದಿನ್ ಬಾವಾ ಸ್ಪಷ್ಟಪಡಿಸಿದ್ದಾರೆ.


ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಮುಂದಿನ ಸುದ್ದಿ
Show comments