Select Your Language

Notifications

webdunia
webdunia
webdunia
webdunia

ಶೋಕಾಚರಣೆ ಸಂದರ್ಭದಲ್ಲಿಯೇ ಸಿಎಂ ಅದ್ಧೂರಿ ವಿವಾಹದಲ್ಲಿ ಭಾಗಿ!

ಶೋಕಾಚರಣೆ ಸಂದರ್ಭದಲ್ಲಿಯೇ ಸಿಎಂ ಅದ್ಧೂರಿ ವಿವಾಹದಲ್ಲಿ ಭಾಗಿ!
ಮಂಗಳೂರು , ಶುಕ್ರವಾರ, 6 ಜನವರಿ 2017 (09:50 IST)
ಉದ್ಯಮಿ ಬಿ.ಆರ್.ಶೆಟ್ಟಿ ಮಗನ ಅದ್ಧೂರಿ ವಿವಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ಥಿತರಿದ್ದರು. ಮಂಗಳೂರು ಸಮೀಪದ ಆಡ್ಯಾರ್‌ನಲ್ಲಿ ಈ ಅದ್ಧೂರಿ ವಿವಾಹ ಸಮಾರಂಭ ನಡೆಯಿತು.
ಸುಮಾರು ನೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಡೆದ ಈ ಅದ್ಧೂರಿ ವಿವಾಹ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು. 
 
ಶೋಕಾಚರಣೆ ಸಂದರ್ಭದಲ್ಲಿ ಸಿಎಂ ಅದ್ಧೂರಿ ಮದುವೆಯಲ್ಲಿ ಭಾಗಿ.....
 
ಮಹದೇವಪ್ರಸಾದ್ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಆಚರಿಸುತ್ತಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಉದ್ಯಮಿ ಬಿ.ಆರ್.ಶೆಟ್ಟಿ ಮಗನ ಅದ್ಧೂರಿ ಮದುವೆಯಲ್ಲಿ ಭಾಗವಹಿಸಲು ಮಂಗಳೂರಿಗೆ ವಿಶೇಷ ವಿಮಾನದಲ್ಲಿ ಬಂದಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಬುದ್ಧಿ ಇಲ್ಲ ಅಂತ ಸಾಬೀತುಪಡಿಸಲು ಇದಕ್ಕಿಂತ ಒಳ್ಳೆ ನಿದರ್ಶನ ಬೇಕೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಖಾರವಾಗಿ ಪ್ರಶ್ನಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ವಂತ ಮಗಳಿಗೆ ಗರ್ಭಪಾತ ಮಾಡಿಸಿರುವ ಸಿ.ಎಂ.ಇಬ್ರಾಹಿಂ ಮೇಲೆ ಕೇಸ್ ಯಾಕಿಲ್ಲ?