Publish Date: Wed, 22 Jun 2016 (15:45 IST)
Updated Date: Wed, 22 Jun 2016 (15:47 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಡಾ.ಎ.ಬಿ.ಮಲಕರೆಡ್ಡಿ ಆರೋಪಿಸಿದ್ದಾರೆ.
ಸಚಿವ ಸಂಪುಟದಿಂದ ಕೈಬಿಟ್ಟಿದ್ದಕ್ಕೆ ಅಸಮಾಧಾನ ಹಿನ್ನೆಲೆಯಲ್ಲಿ ಇಂದು ಮಾಜಿ ಸಚಿವ ಅಂಬರೀಶ್ ಅವರನ್ನು ಭೇಟಿ ಮಾಡಿ ಈಗ ಅಧಿಕಾರ ಸಿಕ್ಕಿದೆ ಅವರು ಮಾತನಾಡುತ್ತಿದ್ದಾರೆ, ಮುಂಬರುವ ದಿನಗಳಲ್ಲಿ ಅವರ ವರ್ತನೆ ಬಗ್ಗೆ ಹೈಕಮಾಂಡ್ಗೆ ದೂರು ನೀಡಲಾಗುವುದು ಎಂದು ಎಚ್ಚರಿಸಿದ್ದಾರೆ.
ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಮಾಜಿ ಸಚಿವ ಖಮರುಲ್ ಇಸ್ಲಾಂ ಆಕ್ರೋಶ ವ್ಯಕ್ತಪಡಿಸಿ, ಖರ್ಗೆ ಸ್ವಾರ್ಥಕ್ಕಾಗಿ ನನ್ನನ್ನು ಬಲಿಕೊಡಲಾಯಿತು ಎಂದು ಆರೋಪಿಸಿದ್ದಾರೆ.
ಹಿರಿಯ ಮುಖಂಡ ವಿ.ಶ್ರೀನಿವಾಸ್ ಪ್ರಸಾದ್ ಅವರೊಂದಿಗೆ ಅಗತ್ಯವಾದಲ್ಲಿ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರೊಂದಿಗೆ ಚರ್ಚೆ ನಡೆಸುವುದಾಗಿ ಮಾಜಿ ಸಚಿವ ಎ.ಬಿ.ಮಲಕರೆಡ್ಡಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ