Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಸರ್ವಾಧಿಕಾರಿಯಂತೆ ವರ್ತನೆ; ಪೂಜಾರಿ

Webdunia
ಮಂಗಳವಾರ, 26 ಜುಲೈ 2016 (12:57 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಯಾರ ಮಾತು ಕೇಳುತ್ತಿಲ್ಲ. ಯಾರ ಕಷ್ಟಗಳಿಗೂ ಸ್ಪಂದಿಸುತ್ತಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ಧನ್ ಪೂಜಾರಿ ಗುಡುಗಿದ್ದಾರೆ.
 
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇತನ ಪರಿಷ್ಕರಣೆಗೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರು ರಾಜ್ಯ ವ್ಯಾಪ್ತಿ ಬಸ್ ಬಂದ್‌ಗೆ ಕರೆ ನೀಡಿದ್ದಾರೆ. ರಾಜ್ಯ ಸರಕಾರ ಸಾರಿಗೆ ನೌಕರರ ಮುಷ್ಕರವನ್ನು ಸರಿಯಾಗಿ ನಿರ್ವಹಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಾವೇ ಬುದ್ಧಿವಂತರೆಂದು ಭಾವಿಸಿದ್ದಾರೆ. ಅವರ ಬುದ್ಧಿಗೇಡಿ ವರ್ತನೆಯಿಂದ ರಾಜ್ಯ ಕಾಂಗ್ರೆಸ್ ಹಾಳಾಗುತ್ತಿದೆ ಎಂದು ಹೇಳಿದರು.
 
ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಹಾಗೂ ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಮಪತಿ ಆತ್ಮಹತ್ಯೆ ಪ್ರಕರಣದಲ್ಲಿ ರಾಜ್ಯ ಸರಕಾರ ಎಡುವಿದೆ. ಈ ಕುರಿತು ಕಾಂಗ್ರೆಸ್ ಹೈಕಮಾಂಡ್‌ಗೆ ದೂರು ನೀಡುತ್ತೇನೆ ಎಂದು ಎಚ್ಚರಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಕಣ್ಣಿದ್ದು ಕುರುಡರಂತೆ ಹಾಗೂ ಬಾಯಿದ್ದು ಮೂಕನಂತೆ ವರ್ತಿಸುತ್ತಿದ್ದಾರೆ ಎಂದು ಅವರ ಕಾರ್ಯವೈಖರಿ ಕುರಿತು ಕಾಂಗ್ರೆಸ್ ಮುಖಂಡ ಜನಾರ್ಧನ್ ಪೂಜಾರಿ ಬೇಸರ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments