ರಾಜ್ಯಸಭೆ ಚುನಾವಣೆಗೆ ಮತ ನೀಡಲು ಶಾಸಕರಿಂದ ಕೋಟಿ ಕೋಟಿ ಹಣದ ಬೇಡಿಕೆ ಪ್ರಕರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೆ ನೇರ ಕಾರಣ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗಂಭೀರವಾಗಿ ಆರೋಪಿಸಿದ್ದಾರೆ.
ಕಲಬುರ್ಗಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಮತ ನೀಡಿ ಎಂದು ನಾವು ಯಾವ ಶಾಸಕರಿಗೂ ಬೇಡಿಕೆ ಇಟ್ಟಿಲ್ಲ. ನಮ್ಮನ್ನು ಬೆಂಬಲಿಸುವವರು ನಮ್ಮ ಪಕ್ಷಕ್ಕೆ ಮತ ನೀಡುತ್ತಾರೆ ಎಂದು ಹೇಳಿದ್ದಾರೆ.
ರಾಜ್ಯಸಭೆಗೆ ಮತ ನೀಡಲು ಶಾಸಕರಿಂದ ಹಣದ ಬೇಡಿಕೆ ಪ್ರಕರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೆ ನೇರ ಕಾರಣ. ಅವರು ಪಕ್ಷೇತರ ಶಾಸಕರಿಗೆ ತಮ್ಮ ಪಕ್ಷದ ಪರವಾಗಿ ಮತ ಚಲಾಯಿಸಿದರೆ ಅವರ ಕ್ಷೇತ್ರಕ್ಕೆ ನೂರು ಕೋಟಿ ಹಣವನ್ನು ಅನುದಾನವಾಗಿ ನೀಡುತ್ತೇವೆ ಎಂದು ಶಾಸಕರಿಗೆ ಆಮಿಷ ಒಡ್ಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.