ತಮಿಳುನಾಡಿಗೆ ಸೆಪ್ಟೆಂಬರ್ 20 ರವರೆಗೆ 12 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ.
ನಾಳೆ ಬೆಳಿಗ್ಗೆ 10 ಗಂಟೆಗೆ ತುರ್ತು ಸಚಿವ ಸಂಪುಟ ಸಭೆ ನಡೆಯಲಿದೆ. ಕಾವೇರಿ ನೀರು ಬಿಡುವ ಕುರಿತಂತೆ ಮುಂದಿನ ನಡೆಯ ಬಗ್ಗೆ ಸಭೆಯಲ್ಲಿ ಸಮಾಲೋಚನೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಸುಪ್ರೀಂಕೋರ್ಟ್ ತೀರ್ಪು ಪಾಲಿಸಿದಲ್ಲಿ ಕಾವೇರಿ ಜಲಾಶಯಗಳು ಬರಿದಾಗಿ ಕುಡಿಯುವ ನೀರಿಗೂ ತೀವ್ರ ತೊಂದರೆ ಎದುರಿಸಬೇಕಾದ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ರೀತಿ ಮುಂದಿನ ಹೆಜ್ಜೆಯಿಡಬೇಕು ಎನ್ನುವ ಬಗ್ಗೆ ಸಚಿವರೊಂದಿಗೆ ಮತ್ತು ತಜ್ಞರೊಂದಿಗೆ ಚರ್ಚೆ ನಡೆಸಲಿದ್ದಾರೆ.
ಕಾವೇರಿ ವಿವಾದದಲ್ಲಿ ರಾಜ್ಯಕ್ಕೆ ಅನ್ಯಾಯ ಖಂಡಿಸಿ ಕನ್ನಡ ಪರ ಸಂಘಟನೆಗಳು ಉಗ್ರ ಪ್ರತಿಭಟನೆಗಿಳಿದಿವೆ. ಬೆಂಗಳೂರು, ಮೈಸೂರು, ಮಂಡ್ಯ, ಹುಬ್ಬಳ್ಳಿ ನಗರಗಳಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗತೊಡಗಿದೆ.
ಶಾಲಾ ಕಾಲೇಜುಗಳಿಗೆ ಮಧ್ಯಾಹ್ನದಿಂದಲೇ ರಜೆ ಘೋಷಿಸಲಾಗಿದ್ದು, ವಿದ್ಯಾರ್ಥಿಗಳನ್ನು ಆದಷ್ಟು ಬೇಗ ಮನೆಗಳಿಗೆ ಕಳುಹಿಸಲು ಅಡಳಿತ ಮಂಡಳಿಗಳು ಹರಸಾಹಸ ಪಡುತ್ತಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ