Select Your Language

Notifications

webdunia
webdunia
webdunia
webdunia

ಮಾಜಿ ಗೃಹ ಸಚಿವ ಜಾರ್ಜ್ ಬೆಂಬಲಿಸಲು ಶಾಸಕರಿಗೆ ಸಿಎಂ ಕಟ್ಟಾಜ್ಞೆ

ಮಾಜಿ ಗೃಹ ಸಚಿವ ಜಾರ್ಜ್
ಬೆಂಗಳೂರು , ಶುಕ್ರವಾರ, 8 ಜುಲೈ 2016 (16:06 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಹೆಸರು ಕೇಳಿ ಬಂದಿದ್ದು, ರಾಜ್ಯ ಸಚಿವ ಸಂಪುಟದ ಎಲ್ಲ ಸದಸ್ಯರು ಅವರ ಬೆಂಬಲಕ್ಕೆ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
 
ಸಚಿವ ಸಂಪುಟ ಸಭೆ ಕರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾವು ಒಬ್ಬರಿಗೊಬ್ಬರು ಸಹಾಯ ಮಾಡಿದರೆ ಮಾತ್ರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ. ಈಗಾಗಲೇ ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದೇನೆ. ತನಿಖೆಯ ನಂತರ ಸತ್ಯಾಸತ್ಯತೆಗಳು ಬಹಿರಂಗವಾಗಲಿದೆ ಎಂದು ತಿಳಿಸಿದ್ದಾರೆ.
 
ಅಧಿವೇಶನದಲ್ಲಿ ಪ್ರತಿಪಕ್ಷಗಳು ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಚರ್ಚೆಗೆ ತರುವ ನಿರೀಕ್ಷೆ ಇದ್ದು, ಎಲ್ಲ ಸದಸ್ಯರು ಒಂದೇ ತರಹದ ಹೇಳಿಕೆ ನೀಡಿ, ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರನ್ನು ಬೆಂಬಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸದಸ್ಯರಿಗೆ ಸೂಚನೆ ನೀಡಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೀರ್ಮಾನಕ್ಕೆ ಬಹುತೇಕ ಸದಸ್ಯರು ಸಮ್ಮತಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಜಮ್ಮು ಕಾಶ್ಮಿರದಲ್ಲಿ ಉಗ್ರರ ಹಾವಳಿ ಹೆಚ್ಚಳ : ಉಗ್ರರ ನರಮೇಧಕ್ಕೆ ಸೇನೆ ಸಜ್ಜು