Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಕಾಮನ್‌ ಸೆನ್ಸ್ ಇಲ್ಲದ ಮುಖ್ಯಮಂತ್ರಿ: ಯಡಿಯೂರಪ್ಪ

ಸಿದ್ದರಾಮಯ್ಯ ಕಾಮನ್‌ ಸೆನ್ಸ್ ಇಲ್ಲದ ಮುಖ್ಯಮಂತ್ರಿ: ಯಡಿಯೂರಪ್ಪ
ಉಡುಪಿ , ಮಂಗಳವಾರ, 24 ಜನವರಿ 2017 (13:35 IST)
ಸಿದ್ದರಾಮಯ್ಯ ಕಾಮನ್‌ ಸೆನ್ಸ್ ಇಲ್ಲದ ಮುಖ್ಯಮಂತ್ರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಪ್ರತಿಯೊಂದಕ್ಕೂ ಕೇಂದ್ರ ಸರಕಾರದತ್ತ ಬೊಟ್ಟು ಮಾಡಿ ತೋರಿಸುವ ಪ್ರವೃತ್ತಿ ಹೊಂದಿದ್ದಾರೆ. ಸಿದ್ದರಾಮಯ್ಯ ಕಾಮನ್‌ ಸೆನ್ಸ್ ಇಲ್ಲದ ಮುಖ್ಯಮಂತ್ರಿ ಎಂದು ವಾಗ್ದಾಳಿ ನಡೆಸಿದರು.
 
ಕೇಂದ್ರ ಸರಕಾರದಿಂದ ಬರ ಪರಿಹಾರದ ಹಣ ಬರುವುದು ಸ್ವಲ್ಪ ತಡವಾಗಿದೆ ನಿಜ. ಆದರೆ, ಬರ ಪರಿಹಾರದ ಹಣ ರಾಜ್ಯ ಸರಕಾರಕ್ಕೆ ತಲುಪಿದೆ. ಬರ ಪರಿಹಾರದ ಹಣವನ್ನು ಕೇಂದ್ರ ಸರಕಾರ ನೀಡಿಲ್ಲ ಎಂದು ದೂರುವುದರಲ್ಲಿ ಅರ್ಥವಿಲ್ಲ ಎಂದರು. 
 
ಬರ ಪರಿಹಾರ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಒಂದು ತಿಂಗಳಾಯ್ತು. ಆದರೆ, ಪ್ರಧಾನಿ ಮೋದಿ ನಯಾಪೈಸೆ ಹಣವನ್ನು ಬಿಡುಗಡೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಂಬಳ ಆಚರಣೆಗೆ ಅಗತ್ಯ ಬಿದ್ರೆ ಸುಗ್ರೀವಾಜ್ಞೆ ಜಾರಿ: ಸಿಎಂ ಭರವಸೆ