Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯರಿಂದ ಅಹಿಂದ ವರ್ಗಕ್ಕೆ ಅನ್ಯಾಯ, ಹೀಗಾಗಿ ಪ್ರಸಾದ್, ಇಬ್ರಾಹಿಂ ಸಿಡಿದೆದ್ದಿದ್ದಾರೆ: ಶ್ರೀರಾಮುಲು

ಸಿದ್ದರಾಮಯ್ಯರಿಂದ ಅಹಿಂದ ವರ್ಗಕ್ಕೆ ಅನ್ಯಾಯ, ಹೀಗಾಗಿ ಪ್ರಸಾದ್, ಇಬ್ರಾಹಿಂ ಸಿಡಿದೆದ್ದಿದ್ದಾರೆ: ಶ್ರೀರಾಮುಲು
ಕಲಬುರ್ಗಿ , ಸೋಮವಾರ, 24 ಅಕ್ಟೋಬರ್ 2016 (15:48 IST)
ಅಹಿಂದದ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅದೇ ವರ್ಗಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಹೀಗಾಗಿ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಹಾಗೂ ಸಿಎಂ ಇಬ್ರಾಹಿಂ ಸಿಡಿದೆದ್ದಿದ್ದಾರೆ ಎಂದು ಸಂಸದ ಶ್ರೀರಾಮುಲು ಆರೋಪಿಸಿದ್ದಾರೆ.
 
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ರಾಜ್ಯ ಸರಕಾರದ ಹಣಕಾಸು ಸ್ಥಿತಿ ಕುರಿತು ಸಿಎಂ ಶ್ವೇತಪತ್ರ ಹೊರಡಿಸಲಿ ಎಂದು ಆಗ್ರಹಿಸಿದರು.
 
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಹಿಂದೂ ಕಾರ್ಯಕರ್ತರ ಸರಣಿ ಕಗ್ಗೊಲೆ ನಡೆಯುತ್ತಿದೆ. ಈ ಕುರಿತು ಸಮಗ್ರ ತನಿಖೆಯಾಗಬೇಕು. ಹಿಂದೂ ಕಾರ್ಯಕರ್ತರ ಹತ್ಯೆ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಸಂಸದ ಶ್ರೀರಾಮುಲು ಒತ್ತಾಯಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳೆಯನ್ನು ಕೆಣಕಿ ಚಪ್ಪಲಿ ಏಟು ತಿಂದ ಬಿಜೆಪಿ ಮುಖಂಡ