Select Your Language

Notifications

webdunia
webdunia
webdunia
webdunia

ಆರೇಳು ತಿಂಗಳಲ್ಲಿ ಕಾಂಗ್ರೆಸ್ ಸರಕಾರ ಪತನ: ಕುಮಾರಸ್ವಾಮಿ ಭವಿಷ್ಯ

ಆರೇಳು ತಿಂಗಳಲ್ಲಿ ಕಾಂಗ್ರೆಸ್ ಸರಕಾರ ಪತನ: ಕುಮಾರಸ್ವಾಮಿ ಭವಿಷ್ಯ
ಬೆಂಗಳೂರು , ಗುರುವಾರ, 2 ಫೆಬ್ರವರಿ 2017 (14:31 IST)
ಆರೇಳು ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಪತನವಾಗಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೇಳು ತಿಂಗಳಲ್ಲಿ ರಾಜ್ಯ ಸರಕಾರ ಬಿಳಲಿದೆ. ನಾನು ಭವಿಷ್ಯ ನುಡಿಯುತ್ತಿಲ್ಲ. ರಾಜ್ಯ ಕಾಂಗ್ರೆಸ್ ಪಾಳಯದಲ್ಲಿನ ಇತ್ತೀಚ ರಾಜಕೀಯ ಬೆಳವಣಿಗೆಯಿಂದಲೇ ತಿಳಿಯುತ್ತೆ ಎಂದರು.
 
2018 ರ ಸಾಲಿನಲ್ಲಿ ನಡೆಯಬೇಕಿದ್ದ ವಿಧಾನಸಭೆ ಚುನಾವಣೆ 2017ರಲ್ಲಿಯೇ ನಡೆಯಲಿದೆ. ಗುಜರಾತ ವಿಧಾನಸಭೆ ಚುನಾವಣೆ ಜೊತೆಯಲ್ಲಿಯೇ ಕರ್ನಾಟಕ ರಾಜ್ಯದಲ್ಲಿ ಚುನಾವಣೆ ನಡೆಯಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. 
 
ಇತ್ತೀಚೆಗೆ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಂಡೆದ್ದು ಮಾಜಿ ಶಾಸಕ ಶ್ರೀನಿವಾಸ್ ಪ್ರಸಾದ್ ಹಾಗೂ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಕಾಂಗ್ರೆಸ್ ಪಕ್ಷ ತೊರೆದಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕ್ಲಾಸ್ ರೂಂನಲ್ಲಿ ವಿದ್ಯಾರ್ಥಿಗಳೆದುರೇ ಪ್ರಿಯತಮೆಯನ್ನು ಸುಟ್ಟು ತಾನೂ ಬೆಂಕಿ ಹಚ್ಚಿಕೊಂಡ ಪ್ರೇಮಿ