Select Your Language

Notifications

webdunia
webdunia
webdunia
webdunia

ಭ್ರಷ್ಟರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ತು ಸಿಎಂ ಸಿದ್ದರಾಮಯ್ಯನವರಿಗಿಲ್ಲ: ಬಿಜೆಪಿ

ಭ್ರಷ್ಟರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ತು ಸಿಎಂ ಸಿದ್ದರಾಮಯ್ಯನವರಿಗಿಲ್ಲ: ಬಿಜೆಪಿ
ಮೈಸೂರು , ಬುಧವಾರ, 24 ಆಗಸ್ಟ್ 2016 (14:22 IST)
ಸಿಎಸ್ ಅರವಿಂದ ಜಾಧವ್ ವಿರುದ್ಧ ಭೂ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಂಸದ ಪ್ರತಾಪ್ ಸಿಂಹ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರಕಾರದಲ್ಲಿ ಕಳ್ಳಕಾಕರಿಗೆಲ್ಲಾ ಸ್ಥಾನಮಾನ ನೀಡಲಾಗಿದೆ ಎಂದು ಲೇವಡಿ ಮಾಡಿದರು.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳಂಕಿತ ಸಚಿವರ ಮೇಲೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರಮ ಕೈಗೊಂಡಿಲ್ಲ. ಇನ್ನೂ ಸಿಎಸ್ ಮೇಲೆ ಕ್ರಮ ಕೈಗೊಳ್ಳುತ್ತಾರೆ ಎನ್ನುವ ವಿಶ್ವಾಸವೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. 
 
ಪಾಕ್ ಪರ ನಟಿ ರಮ್ಯಾ ಹೇಳಿಕೆಗೆ ವ್ಯಂಗ್ಯ......
 
ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅತಿಥಿ ರಾಜಕಾರಣಿ, ಪೆದ್ದುಪೆದ್ದು ರಾಜಕಾರಣಿ ಎಂದು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.
 
ನಟಿ ರಮ್ಯಾ ಪಾಕ್ ಪರವಾಗಿ ತಿಳಿಗೇಡಿ ಹೇಳಿಕೆ ನೀಡಿದ್ದಾರೆ. ಇದ್ದಕ್ಕೆ ನಾನು ಪ್ರತಿಕ್ರಿಯಿ ನೀಡಲ್ಲ ಎಂದರು. ಹಾಗೂ ಯೂತ್ ಪಾರ್ಲಿಮೆಂಟರಿ ನಿಯೋಗದೊಂದಿಗೆ ರಮ್ಯಾ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸುವ ವಿಶೇಷ ಪ್ರೀತಿ ಕಾಂಗ್ರೆಸ್ ಪಕ್ಷಕ್ಕೆ ಏನಿತ್ತು ಎಂದು ಪ್ರಶ್ನಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ನಿಗಮ ಮಂಡಳಿಗಳಲ್ಲಿ ಪಕ್ಷ ನಿಷ್ಠರಿಗೆ ಸ್ಥಾನಮಾನ: ಜಿ.ಪರಮೇಶ್ವರ್