Select Your Language

Notifications

webdunia
webdunia
webdunia
webdunia

ಜನರ ಬೆಂಬಲ ಇಲ್ಲದೆ ಸಿಎಂ ಸಿದ್ದರಾಮಯ್ಯ ಕಂಗಾಲು: ಪ್ರತಾಪ್ ಸಿಂಹ್

ಜನರ ಬೆಂಬಲ ಇಲ್ಲದೆ ಸಿಎಂ ಸಿದ್ದರಾಮಯ್ಯ ಕಂಗಾಲು: ಪ್ರತಾಪ್ ಸಿಂಹ್
ಮೈಸೂರು , ಭಾನುವಾರ, 25 ಡಿಸೆಂಬರ್ 2016 (12:48 IST)
ನಂಜನಗೂಡು ಉಪಚುನಾವಣೆ ಹಿನ್ನೆಲೆಯಲ್ಲಿ ಜನರ ಬೆಂಬಲ ಇಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೊಂದಲಕ್ಕೀಡಾಗಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ್ ಲೇವಡಿ ಮಾಡಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು ಜನವರಿ 2 ರಂದು ಅಧಿಕೃತವಾಗಿ ಬಿಜೆಪಿ ಪಕ್ಷ ಸೇರ್ಪಡೆಯಾಗಲಿದ್ದಾರೆ. ನಾವೆಲ್ಲ ಸೇರಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳುತ್ತೇವೆ. ಬಿಜೆಪಿ ಪಕ್ಷಕ್ಕೆ ಶ್ರೀನಿವಾಸ್ ಪ್ರಸಾದ್ ಅವರು ಹಿರಿಯ ಅಣ್ಣನಂತೆ ಎಂದು ಅಭಿಪ್ರಾಯಪಟ್ಟರು. 
 
ನಂಜನಗೂಡು ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ಪ್ರಸಾದ್ ಅವರು ಸ್ಪರ್ಧಿಸಲಿದ್ದಾರೆ. ಆದರೆ, ಸುದೀರ್ಘ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷ ಅಭ್ಯರ್ಥಿ ಹುಡುಕುವ ಗೊಂದಲದಲ್ಲಿದೆ ಎಂದು ಟೀಕಿಸಿದರು.  
 
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಂಡೆದ್ದು ಕಾಂಗ್ರೆಸ್ ಪಕ್ಷದಿಂದ ಹೊರ ಬಂದಿದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು ಜನವರಿ 2 ರಂದು ಅಧಿಕೃತವಾಗಿ ಬಿಜೆಪಿ ಸೇರುವುದಾಗಿ ಘೋಷಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಜನ್ಮದಿನಕ್ಕೆ ಮೋದಿ ಶುಭಹಾರೈಕೆ