Webdunia - Bharat's app for daily news and videos

Install App

ಜನರ ಬೆಂಬಲ ಇಲ್ಲದೆ ಸಿಎಂ ಸಿದ್ದರಾಮಯ್ಯ ಕಂಗಾಲು: ಪ್ರತಾಪ್ ಸಿಂಹ್

Webdunia
ಭಾನುವಾರ, 25 ಡಿಸೆಂಬರ್ 2016 (12:48 IST)
ನಂಜನಗೂಡು ಉಪಚುನಾವಣೆ ಹಿನ್ನೆಲೆಯಲ್ಲಿ ಜನರ ಬೆಂಬಲ ಇಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೊಂದಲಕ್ಕೀಡಾಗಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ್ ಲೇವಡಿ ಮಾಡಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು ಜನವರಿ 2 ರಂದು ಅಧಿಕೃತವಾಗಿ ಬಿಜೆಪಿ ಪಕ್ಷ ಸೇರ್ಪಡೆಯಾಗಲಿದ್ದಾರೆ. ನಾವೆಲ್ಲ ಸೇರಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳುತ್ತೇವೆ. ಬಿಜೆಪಿ ಪಕ್ಷಕ್ಕೆ ಶ್ರೀನಿವಾಸ್ ಪ್ರಸಾದ್ ಅವರು ಹಿರಿಯ ಅಣ್ಣನಂತೆ ಎಂದು ಅಭಿಪ್ರಾಯಪಟ್ಟರು. 
 
ನಂಜನಗೂಡು ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ಪ್ರಸಾದ್ ಅವರು ಸ್ಪರ್ಧಿಸಲಿದ್ದಾರೆ. ಆದರೆ, ಸುದೀರ್ಘ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷ ಅಭ್ಯರ್ಥಿ ಹುಡುಕುವ ಗೊಂದಲದಲ್ಲಿದೆ ಎಂದು ಟೀಕಿಸಿದರು.  
 
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಂಡೆದ್ದು ಕಾಂಗ್ರೆಸ್ ಪಕ್ಷದಿಂದ ಹೊರ ಬಂದಿದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು ಜನವರಿ 2 ರಂದು ಅಧಿಕೃತವಾಗಿ ಬಿಜೆಪಿ ಸೇರುವುದಾಗಿ ಘೋಷಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೌರ ಕಾರ್ಮಿಕರ ವಿಚಾರದಲ್ಲಿ ದಿಟ್ಟ ಹೆಜ್ಜೆಯಿಟ್ಟ ಸಿಎಂ ಸಿದ್ದರಾಮಯ್ಯ ಸರ್ಕಾರ

Karavali Rain: ಬಿಸಿಲ ಬೇಗೆಗೆ ಸುಸ್ತಾಗಿದ್ದ ಮಂದಿಗೆ ಊಹಿಸಲಾಗದ ರೀತಿಯಲ್ಲಿ ಸುರಿದ ಮಳೆ

Pak, India Live: ದಾಳಿ ಬಳಿಕ ಮೊದಲ ಭಾಷಣ ಮಾಡಲಿರುವ ಪ್ರಧಾನಿ ಮೋದಿ, ಹೆಚ್ಚಿದ ಕುತೂಹಲ

ರಸ್ತೆ ವಿವಾದ: ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಗ್ರಾ.ಪಂ ಉಪಾಧ್ಯಕ್ಷ ಬಿಜೆಪಿಯಿಂದ ಅಮಾನತು

Virat Kohli: ಭಾರತೀಯ ಸೇನೆಯ ಸುದ್ದಿಗೋಷ್ಠಿಯಲ್ಲೂ ವಿರಾಟ್ ಕೊಹ್ಲಿಯದ್ದೇ ಹವಾ

ಮುಂದಿನ ಸುದ್ದಿ
Show comments