Select Your Language

Notifications

webdunia
webdunia
webdunia
webdunia

ಕಾವೇರಿ ವಿವಾದದಲ್ಲಿ ಸಿದ್ದರಾಮಯ್ಯ ಬಂಗಾರಪ್ಪ ದಾರಿ ಅನುಸರಿಸಲಿ: ಶಿವಣ್ಣ

ಕಾವೇರಿ ವಿವಾದದಲ್ಲಿ ಸಿದ್ದರಾಮಯ್ಯ ಬಂಗಾರಪ್ಪ ದಾರಿ ಅನುಸರಿಸಲಿ: ಶಿವಣ್ಣ
ಬೆಂಗಳೂರು , ಶುಕ್ರವಾರ, 9 ಸೆಪ್ಟಂಬರ್ 2016 (12:54 IST)
ಕಾವೇರಿ ವಿವಾದ ಕುರಿತಂತೆ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅನುಸರಿಸಿದ ದಾರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಸರಿಸಲಿ ಎಂದು ಹ್ಯಾಟ್ರಿಕ್ ಹಿರೋ ಡಾ.ಶಿವರಾಜ್‌ ಕುಮಾರ್ ಹೇಳಿದ್ದಾರೆ. 
 
ಅಂದಿನ ಮುಖ್ಯಮಂತ್ರಿ ಬಂಗಾರಪ್ಪ ಅವರಿಗೆ ಸುಪ್ರೀಂಕೋರ್ಟ್ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿದಾಗ, ಆದೇಶವನ್ನು ಬದಿಗೊತ್ತಿ ಸುಗ್ರಿವಾಜ್ಞೆ ತರುವ ಮೂಲಕ, ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಘೋಷಿಸಿದ್ದರು. 
 
ಸುಪೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ವಿರೋಧಿಸಿ ಇಂದಿನ ಕರ್ನಾಟಕ್ ಬಂದ್‌ಸಂದರ್ಭದಲ್ಲಿ ಮಾತನಾಡಿದ ಅವರು, ಕಾವೇರಿ ವಿಷಯವಾಗಿರಲಿ ಅಧವಾ ಮಹಾದಾಯಿ ವಿವಾದವಾಗಿರಲಿ ನಾವು ರಾಜ್ಯದ ಜನತೆಯ ಪರವಾಗಿರುತ್ತೇವೆ ಎಂದು ಗುಡುಗಿದರು.
 
ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಕೂಡಾ ಕಲಾವಿದರು. ಯಾವುದೇ ಸಮಸ್ಯೆ ಬಂದಾಗ ಪರಸ್ಪರರು ಸೌಹಾರ್ದಯುತವಾಗಿ ಸಮಸ್ಯೆಯನ್ನು ಪರಿಹರಿಸಿಕೊಳ್ಳಬೇಕು. ಯಾರೊಬ್ಬ ರೈತರಿಗೂ ಅನ್ಯಾಯವಾಗಬಾರದು ಎಂದು ಶಿವರಾಜ್ ಕುಮಾರ್ ಮನವಿ ಮಾಡಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಐಸಿಯುನಲ್ಲಿದ್ದ ಡೆಂಗ್ಯೂ ರೋಗಿಯ ಮೇಲೆ ವೈದ್ಯನ ಅತ್ಯಾಚಾರ