Webdunia - Bharat's app for daily news and videos

Install App

ಕಾವೇರಿ ವಿವಾದದಲ್ಲಿ ಸಿದ್ದರಾಮಯ್ಯ ಬಂಗಾರಪ್ಪ ದಾರಿ ಅನುಸರಿಸಲಿ: ಶಿವಣ್ಣ

Webdunia
ಶುಕ್ರವಾರ, 9 ಸೆಪ್ಟಂಬರ್ 2016 (12:54 IST)
ಕಾವೇರಿ ವಿವಾದ ಕುರಿತಂತೆ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅನುಸರಿಸಿದ ದಾರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಸರಿಸಲಿ ಎಂದು ಹ್ಯಾಟ್ರಿಕ್ ಹಿರೋ ಡಾ.ಶಿವರಾಜ್‌ ಕುಮಾರ್ ಹೇಳಿದ್ದಾರೆ. 
 
ಅಂದಿನ ಮುಖ್ಯಮಂತ್ರಿ ಬಂಗಾರಪ್ಪ ಅವರಿಗೆ ಸುಪ್ರೀಂಕೋರ್ಟ್ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿದಾಗ, ಆದೇಶವನ್ನು ಬದಿಗೊತ್ತಿ ಸುಗ್ರಿವಾಜ್ಞೆ ತರುವ ಮೂಲಕ, ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಘೋಷಿಸಿದ್ದರು. 
 
ಸುಪೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ವಿರೋಧಿಸಿ ಇಂದಿನ ಕರ್ನಾಟಕ್ ಬಂದ್‌ಸಂದರ್ಭದಲ್ಲಿ ಮಾತನಾಡಿದ ಅವರು, ಕಾವೇರಿ ವಿಷಯವಾಗಿರಲಿ ಅಧವಾ ಮಹಾದಾಯಿ ವಿವಾದವಾಗಿರಲಿ ನಾವು ರಾಜ್ಯದ ಜನತೆಯ ಪರವಾಗಿರುತ್ತೇವೆ ಎಂದು ಗುಡುಗಿದರು.
 
ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಕೂಡಾ ಕಲಾವಿದರು. ಯಾವುದೇ ಸಮಸ್ಯೆ ಬಂದಾಗ ಪರಸ್ಪರರು ಸೌಹಾರ್ದಯುತವಾಗಿ ಸಮಸ್ಯೆಯನ್ನು ಪರಿಹರಿಸಿಕೊಳ್ಳಬೇಕು. ಯಾರೊಬ್ಬ ರೈತರಿಗೂ ಅನ್ಯಾಯವಾಗಬಾರದು ಎಂದು ಶಿವರಾಜ್ ಕುಮಾರ್ ಮನವಿ ಮಾಡಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತ: ಸಹೋದರನ ಶವಕ್ಕೆ ಹೆಗಲುಕೊಟ್ಟು ಬಿಕ್ಕಿಬಿಕ್ಕಿ ಅತ್ತ ವಿಶ್ವಾಸ್ ರಮೇಶ್ ವಿಡಿಯೊ ಇಲ್ಲಿದೆ

ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯ ಸಂಚರಿಸುವವರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ

ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಹೊಸ ತಿರುವು: ತನಿಖೆಯನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

Viral video: ಹೆದ್ದಾರಿಯಲ್ಲಿ ಬೈಕ್ ರೈಡ್ ವೇಳೆ ಜೋಡಿ ಜೀವಗಳ ರೊಮ್ಯಾನ್ಸ್: ಕೊನೆಗೆ ಆಗಿದ್ದೇನು

ಆಪರೇಷನ್ ಸಿಂಧೂರ ವಿರಾಮದಲ್ಲಿ ಅಮೆರಿಕದ ಪಾತ್ರವಿಲ್ಲ: ಟ್ರಂಪ್‌ಗೆ ಪ್ರಧಾನಿ ಮೋದಿ ಮನವರಿಕೆ

ಮುಂದಿನ ಸುದ್ದಿ
Show comments