Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯ ಸಮಾಜವಾದಿಯಲ್ಲ ಮಜಾವಾದಿ: ಪ್ರಹ್ಲಾದ್ ಜೋಷಿ

ಸಿಎಂ ಸಿದ್ದರಾಮಯ್ಯ ಸಮಾಜವಾದಿಯಲ್ಲ ಮಜಾವಾದಿ: ಪ್ರಹ್ಲಾದ್ ಜೋಷಿ
ಬೆಂಗಳೂರು , ಬುಧವಾರ, 2 ಮಾರ್ಚ್ 2016 (18:00 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಜವಾದಿಯಲ್ಲ, ಮಜಾವಾದಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಲೇವಡಿ ಮಾಡಿದ್ದಾರೆ.
 
ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಸಿಎಂ ಸಿದ್ದರಾಮಯ್ಯ 70 ಲಕ್ಷ ರೂಪಾಯಿ ಬೆಲೆಬಾಳುವ ವಾಚ್ ಕೈಗೆ ಕಟ್ಟುತ್ತಿರುವುದರಿಂದ ಅವರು ಹೇಗೆ ಸಮಾಜವಾದಿಯಾಗುತ್ತಾರೆ. ಅವರೊಬ್ಬ ಮಜಾವಾದಿ ಎಂದಿದ್ದಾರೆ.
 
ಅನಿವಾಸಿ ಭಾರತೀಯ ಗಿರೀಶ್ ಚಂದ್ರ ವರ್ಮಾ ನೀಡಿದ ಗಿಫ್ಟ್ ವಾಚ್ ಬಗ್ಗೆ ಸಿದ್ದರಾಮಯ್ಯನವರು ಕಸ್ಟಮ್ ಇಲಾಖೆಗೆ ಮಾಹಿತಿ ನೀಡಿದ್ದಾರೆಯೇ? ಒಂದು ವೇಳೆ ನೀಡಿದ್ದರೆ, ಅದರ ಬಗ್ಗೆ ಮಾಹಿತಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲಿ ಎಂದು ಸವಾಲ್ ಹಾಕಿದರು.
 
ವಿದೇಶದಿಂದ ದುಬಾರಿ ವಸ್ತು ತರುವಾಗ ಕಸ್ಟಮ್ ಇಲಾಖೆಗೆ ಮಾಹಿತಿ ನೀಡಬೇಕು. ವಾಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ಏಜೆನ್ಸಿಯ ಮೂಲಕ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಕೇಂದ್ರ ಸರಕಾರವನ್ನು ಒತ್ತಾಯಿಸಿದರು.

Share this Story:

Follow Webdunia kannada