Select Your Language

Notifications

webdunia
webdunia
webdunia
webdunia

ಸಚಿವ ರಮೇಶ್ ಜಾರಕಿಹೊಳಿ ಪುತ್ರನ ಅದ್ಧೂರಿ ವಿವಾಹಕ್ಕೆ ಸಿಎಂ ಗೈರು?

ಸಚಿವ ರಮೇಶ್ ಜಾರಕಿಹೊಳಿ ಪುತ್ರನ ಅದ್ಧೂರಿ ವಿವಾಹಕ್ಕೆ ಸಿಎಂ ಗೈರು?
ಬೆಳಗಾವಿ , ಸೋಮವಾರ, 21 ನವೆಂಬರ್ 2016 (14:16 IST)
ಸಚಿವ ರಮೇಶ್ ಜಾರಕಿಹೊಳಿ ಪುತ್ರನ ಅದ್ಧೂರಿ ವಿವಾಹಕ್ಕೆ ಹೋಗದಿರಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ
 
ಇಂದು ಕುಂದಾನಗರಿ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಸಚಿವ ರಮೇಶ್ ಜಾರಕಿಹೊಳಿ ಪುತ್ರನ ಅದ್ಧೂರಿ ವಿವಾಹ ಸಮಾರಂಭ ಜರುಗಲಿದೆ. ಈ ಅದ್ಧೂರಿ ವಿವಾಹದಿಂದ ದೂರ ಉಳಿಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸಚಿವರಿಗೆ ಸೂಚನೆ ನೀಡಿದ್ದಾರೆ.
 
ಮದುವೆಯ ನಂತರ ಗೋಕಾಕ್‌ಗೆ ತೆರಳಿ ನವ ವಧು-ವರರಿಗೆ ಶುಭಕೋರಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.
 
ಇತ್ತೀಚಿಗೆ ಮಾಜಿ ಸಚಿವ ಜನಾರ್ದನ ರೆಡ್ಡಿ ಪುತ್ರಿಯ ಅದ್ಧೂರಿ ವಿವಾಹ ಸಾಕಷ್ಟು ಕೋಲಾಹಲ ಸೃಷ್ಟಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅದ್ಧೂರಿ ವಿವಾಹದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಇಸ್ಲಾಮಿಕ್ ಭಯೋತ್ಪಾದನೆ ನಿರ್ಮೂಲನೆ ಅಗತ್ಯವಾಗಿದೆ: ಸ್ವಾಮಿ