Select Your Language

Notifications

webdunia
webdunia
webdunia
webdunia

ಡೈರಿ ವಿವಾದ: ಮೌನವ್ರತಕ್ಕೆ ಶರಣಾದ ಸಿಎಂ ಸಿದ್ದರಾಮಯ್ಯ

ಡೈರಿ ವಿವಾದ: ಮೌನವ್ರತಕ್ಕೆ ಶರಣಾದ ಸಿಎಂ ಸಿದ್ದರಾಮಯ್ಯ
ಬೆಂಗಳೂರು , ಶುಕ್ರವಾರ, 24 ಫೆಬ್ರವರಿ 2017 (13:27 IST)
ಡೈರಿಯಲ್ಲಿರುವ ಹೆಸರುಗಳು ಬಹಿರಂಗವಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನಕ್ಕೆ ಶರಣಾಗಿದ್ದಾರೆ. ಮನೆಗೆ ಬಂದ ಕಾಂಗ್ರೆಸ್ ನಾಯಕರು ಸಿಎಂ ದರ್ಶನ ಸಾಧ್ಯವಾಗದೆ ಮರಳುತ್ತಿದ್ದಾರೆ.
 
ವಿಧಾನಪರಿಷತ್ ಸದಸ್ಯ ಗೋವಿಂದರಾಜು ಅವರ ಮನೆಯಲ್ಲಿ ದೊರೆತ ಡೈರಿಯಲ್ಲಿ ಕಾಂಗ್ರೆಸ್ ಪಕ್ಷದ ಹಲವು ಘಟಾನುಘಟಿ ನಾಯಕರ ಹೆಸರುಗಳು ಬಹಿರಂಗವಾಗಿವೆ.
 
ಇಂದು ತಮ್ಮ ಅಧಿಕೃತ ನಿವಾಸದಲ್ಲಿಯೇ ಇರುವ ಸಿಎಂ ಸಿದ್ದರಾಮಯ್ಯ, ತಮ್ಮ ಕಾಣಲು ಬಂದಿದ್ದ ಸಂಸದರು, ಶಾಸಕರನ್ನು ಭೇಟಿಯಾಗಲು ನಿರಾಕರಿಸುತ್ತಿದ್ದಾರೆ ಎನ್ನಲಾಗಿದೆ.
 
ಹಿರಿಯ ಕಾಂಗ್ರೆಸ್ ಮುಖಂಡರ ವರ್ತನೆಯೂ ಸಿಎಂ ಸಿದ್ದರಾಮಯ್ಯನವರಿಗೆ ಅಸಮಾಧಾನ ಮೂಡಿಸಿದೆ ಎನ್ನಲಾಗಿದೆ. ಪಕ್ಷವನ್ನು ವಿನಾಕಾರಣ ಬಲಿಪಶುವಾಗಿಸುತ್ತಿದ್ದರೂ ಹಿರಿಯ ಕಾಂಗ್ರೆಸ್ ಸಚಿವರು ಪಕ್ಷದ ಪರ ಹೇಳಿಕೆ ನೀಡದಿರುವುದು ಆಕ್ರೋಶಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಶೇ.50 ಸಬ್ಸಿಡಿ ದರದಲ್ಲಿ ರೈತರಿಗೆ ಸಾವಯವ ಗೊಬ್ಬರ