ಪುತ್ರ ರಾಕೇಶ್ ಅಂತ್ಯ ಸಂಸ್ಕಾರದ ನಂತರ ಮೈಸೂರಿನಲ್ಲಿ ಮೂರು ದಿನ ಉಳಿಯಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ರಾತ್ರಿಯೇ ಬೆಂಗಳೂರಿಗೆ ವಾಪಸಾಗಿದ್ದಾರೆ.
ಮೈಸೂರು ನ್ಯಾಯಾಲಯದಲ್ಲಿ ನಿಗೂಢ ಸ್ಫೋಟ ಸಂಭವಿಸಿರುವ ಹಿನ್ನೆಲೆಯಲ್ಲಿ ಭದ್ರತೆ ದೃಷ್ಟಿಯಿಂದ ಬೆಂಗಳೂರಿಗೆ ತೆರಳುವುದು ಸೂಕ್ತ ಎಂದು ಪೊಲೀಸ್ ಅಧಿಕಾರಿಗಳು ನೀಡಿದ ಸಲಹೆ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.
ನಿನ್ನೆ ಸಂಜೆ ವೇಳೆಯಲ್ಲಿ ಮೈಸೂರಿನ ಕಕ್ಷಿದಾರರು ಬಳಸುವ ಶೌಚಾಲಯದಲ್ಲಿ ನಿಗೂಢ ಸ್ಫೋಟ ಸಂಭವಿಸಿತ್ತು. ಹಾಗೂ ಶೌಚಾಲಯದಲ್ಲಿ ಎರಡು ಅನುಮಾನಾಸ್ಪದ ಪೊಟ್ಟಣಗಳು ದೊರೆತಿದ್ದವು.
ನಿಗೂಢ ಸ್ಫೋಟಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದ್ದು, ಸ್ಥಳದಲ್ಲಿ ತಾಮ್ರದ ತಗಡಿನ ರೀತಿಯ ವಸ್ತು ಹಾಗೂ ಎಲೆಕ್ಟ್ರಾನಿಕ ವಸ್ತುಗಳು ಪತ್ತೆಯಾಗಿದ್ದವು. ಶೌಚಾಲಯದ ಮೇಲ್ಛಾವಣಿ ಸಂಪೂರ್ಣವಾಗಿ ಹಾಳಾಗಿದ್ದು, 6 ರಿಂದ 7 ಜನಕ್ಕೆ ಸಣ್ಣ ಪುಟ್ಟ ಗಾಯಗಳಾಗಿದ್ದವು.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.