Webdunia - Bharat's app for daily news and videos

Install App

ಕಳೆದ ವರ್ಷ ಪುತ್ರ, ಈ ವರ್ಷ ಆಪ್ತ ಸ್ನೇಹಿತನನ್ನು ಕಳೆದುಕೊಂಡೆ ಎಂದು ಕಣ್ಣೀರು ಸುರಿಸಿದ ಸಿಎಂ

Webdunia
ಮಂಗಳವಾರ, 3 ಜನವರಿ 2017 (12:43 IST)
ಸಹಕಾರಿ ಮತ್ತು ಸಕ್ಕರೆ ಸಚಿವ ಎಚ್.ಎಸ್.ಮಹದೇವಪ್ರಸಾದ್ ವಿಧಿವಶರಾದ ಸುದ್ದಿ ಕೇಳಿ ಶಾಕ್‌ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಳೆದ ವರ್ಷ ಪುತ್ರ, ಈ ವರ್ಷ ಆಪ್ತ ಸ್ನೇಹಿತನನ್ನು ಕಳೆದುಕೊಂಡೆ ಎಂದು ಕಣ್ಣೀರು ಸುರಿಸುತ್ತಿರುವ ಸಮಯದಲ್ಲಿ ಗೃಹ ಸಚಿವ ಪರಮೇಶ್ವರ್ ಅವರು ಆಗಮಿಸಿ ಸಾಂತ್ವನ ಹೇಳಿದ ಘಟನೆ ನಡೆದಿದೆ. 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಚಿವ ಎಚ್.ಎಸ್.ಮಹದೇವಪ್ರಸಾದ್ ವಿಧಿವಶರಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಪಕ್ಷ ನೀಡಿದ ಕೆಲಸವನ್ನು ಅತಿ ಉತ್ಸಾಹದಿಂದ ಮಾಡುತ್ತಿದ್ದರು. ಅವರು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೂ ಜಯಭೇರಿಯಾಗುತ್ತಿದ್ದರು ಎಂದು ಭಾವುಕರಾದರು.
 
ಇಂದು ಸರಕಾರಿ ರಜೆ......
 
ಸಚಿವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸರಕಾರ ರಜೆ ಘೋಷಿಸಿದ್ದಾರೆ. 
 
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿರುವ ಖಾಸಗಿ ರೆಸಾರ್ಟ‌್‌ನಲ್ಲಿ ತಂಗಿದ್ದ ಸಹಕಾರ-ಸಕ್ಕರೆ ಸಚಿವ ಸಚಿವ ಎಚ್.ಸಿ.ಮಹದೇವಪ್ರಸಾದ್ ಅವರು, ಇಂದು ಮುಂಜಾನೆ ಹೃದಯಘಾತದಿಂದ ವಿಧಿವಶರಾಗಿದ್ದಾರೆ. 

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments