Webdunia - Bharat's app for daily news and videos

Install App

ಕಾಂಗ್ರೆಸ್ ಮುಕ್ತ ಕರ್ನಾಟಕ ಬಿಡಿ, ಮೊದ್ಲು ಆರೋಪಗಳಿಂದ ಮುಕ್ತರಾಗಿ: ಬಿಜೆಪಿ ನಾಯಕರಿಗೆ ಸಿಎಂ

Webdunia
ಸೋಮವಾರ, 30 ಮೇ 2016 (16:13 IST)
ಕಾಂಗ್ರೆಸ್ ಮುಕ್ತ ಕರ್ನಾಟಕ ಹೇಳಿಕೆಗೆ ತೀರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲು ಬಿಜೆಪಿ ನಾಯಕರು ಆರೋಪ ಮುಕ್ತರಾಗಲಿ ಹೇಳಿದ್ದಾರೆ.
 
ಭ್ರಷ್ಟಾಚಾರ, ಅತ್ಯಾಚಾರ ಆರೋಪಿಗಳಿಂದ ಜೈಲಿನಲ್ಲಿದ್ದ ಬಿಜೆಪಿ ನಾಯಕರು, ಕಾಂಗ್ರೆಸ್ ಪಕ್ಷದ ನಾಯಕರಿಗೆ ಭ್ರಷ್ಟಾಚಾರದ ಪಾಠ ಹೇಳಿಕೊಡಲು ಪ್ರಯತ್ನಿಸುತ್ತಿದ್ದಾರೆ. ಮೊದಲು ಬಿಜೆಪಿ ನಾಯಕರು ಆತ್ಮವಿಮರ್ಶೆ ಮಾಡಿಕೊಳ್ಳಲಿ. ನಂತರ ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಹೇಳಿಕೆ ನೀಡಲಿ ಎಂದು ವ್ಯಂಗ್ಯವಾಡಿದರು.
 
ಕೋಲಾರ ಜಿಲ್ಲೆಯ ನರಸಾಪೂರ ಗ್ರಾಮದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಬಿಜೆಪಿ ನಾಯಕರು ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಮೊದಲು ಅವರು ಭ್ರಷ್ಟಾಚಾರ ಪ್ರಕರಣದಿಂದ ಮುಕ್ತರಾಗಲಿ ಎಂದು ಲೇವಡಿ ಮಾಡಿದ್ದಾರೆ.
 
ನಾವು ಬಿಜೆಪಿ ಮುಕ್ತ ಕರ್ನಾಟಕ ಮಾಡುತ್ತೇವೆ ಎಂದು ಹೇಳುವುದಿಲ್ಲ. ನಮ್ಮ ಸರಕಾರ ರಾಜ್ಯದಲ್ಲಿ ಬಡತನ, ಗುಡಿಸಲು ಮುಕ್ತ ಕರ್ನಾಟಕ ಮಾಡಲು ಶ್ರಮಿಸುತ್ತಿದೆ.  ನಮ್ಮ ಸರಕಾರ ಬಡವರ ಪರವಾಗಿ ಕೆಲಸ ಮಾಡುತ್ತದೆ. ನಮ್ಮ ಸರಕಾರದ ಕಾರ್ಯವೈಖರಿಗೆ ಮತದಾರರು ಮುಂದಿನ ಬಾರಿಯೂ ಕಾಂಗ್ರೆಸ್ ಪಕ್ಷವನ್ನೆ ಬೆಂಬಲಿಸುತ್ತಾರೆ. ಮುಂದಿನ ಬಾರಿಯೂ ನಾವೇ ಅಧಿಕಾರ ನಡೆಸುತ್ತೇವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments