Webdunia - Bharat's app for daily news and videos

Install App

ಬೆಂಕಿ ಹಚ್ಚುವ ಕೆಲಸ ಮಾಡಬೇಡಿ: ಈಶ್ವರಪ್ಪಗೆ ಸಿಎಂ ಸಿದ್ದರಾಮಯ್ಯ ಟಾಂಗ್

Webdunia
ಬುಧವಾರ, 23 ನವೆಂಬರ್ 2016 (14:36 IST)
ನನ್ನ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ನಡುವಿನ ಸಂಬಂಧ ಚೆನ್ನಾಗಿದೆ. ನೀವು ಬೆಂಕಿ ಹಚ್ಚುವ ಕೆಲಸ ಮಾಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪನವರಿಗೆ ಟಾಂಗ್ ನೀಡಿದ್ದಾರೆ.
ಇಂದು ವಿಧಾನ ಪರಿಷತ್‌ನಲ್ಲಿ ಚಳಿಗಾಲದ ಅಧಿವೇಶನಕ್ಕೆ ಪೊಲೀಸ್ ನಿಯೋಜನೆ ಮಾಡಿದ್ದು, ಅವರಿಗೆ ಯಾವುದೇ ಸವಲತ್ತು ನೀಡದಿರುವ ಕುರಿತು ಗೃಹ ಸಚಿವರು ಉತ್ತರ ನೀಡಬೇಕು ಎಂದು ಬಿಜೆಪಿ ಪಕ್ಷದ ರಾಮಚಂದ್ರೆಗೌಡರು ಆಗ್ರಹಿಸಿದರು. ಈ ಕುರಿತು ವರದಿ ತರಿಸಿಕೊಂಡು ಮಾಹಿತಿ ನೀಡುತ್ತೇನೆ ಎಂದು ಗೃಹ ಸಚಿವರು ಉತ್ತರ ನೀಡಿದರು. 
 
ಆದರೆ, ಗೃಹ ಸಚಿವರು ಉತ್ತರ ನೀಡಲೇಬೇಕು ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಧ್ಯ ಪ್ರವೇಶಿಸಿ, ಶೂನ್ಯ ವೇಳೆಯಲ್ಲಿ ಪ್ರಶ್ನೆ ಕೇಳಿದ್ದೀರಾ, ಅವರು ಉತ್ತರ ನೀಡುತ್ತಾರೆ ಎಂದು ಜಿ.ಪರಮೇಶ್ವರ್ ಅವರ ಪರವಹಿಸಿ ಮಾತನಾಡಿದರು.
 
ಇದಕ್ಕೆ ಪ್ರತ್ಯೋತ್ತರ ನೀಡಿದ ಕೆ.ಎಸ್.ಈಶ್ವರಪ್ಪ, ಸದ್ಯ ಈಗಲಾದರೂ ಗೃಹ ಸಚಿವರ ಬೆಂಬಲಕ್ಕೆ ಸಿಎಂ ಬಂದರಲ್ಲಾ ಎಂದು ಅವರ ಕಾಲೆಳೆದರು.
 
ಇದಕ್ಕೆ ಖಾರವಾಗಿ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ನನ್ನ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ನಡುವಿನ ಸಂಬಂಧ ಚೆನ್ನಾಗಿದೆ. ನೀವು ಬೆಂಕಿ ಹಚ್ಚುವ ಕೆಲಸ ಮಾಡಬೇಡಿ. ಮೊದಲು ನಿಮ್ಮ ಹಾಗೂ ಬಿ.ಎಸ್.ಯಡಿಯೂರಪ್ಪನವರ ಸಂಬಂಧ ಹೇಗಾಗಿದೆ ನೋಡಿ ಎಂದು ಕೆ.ಎಸ್.ಈಶ್ವರಪ್ಪನವರಿಗೆ ಟಾಂಗ್ ನೀಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್‌ ಕ್ಯಾಂಟೀನ್‌ನಲ್ಲಿ ಪೌಷ್ಟಿಕಾಂಶಯುಕ್ತ ಆಹಾರ, ಮೆನುವಿನಲ್ಲಿ ಭಾರೀ ಬದಲಾವಣೆ ತಂದ ಸ್ಪೀಕರ್‌

ಒಡಿಶಾ, ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ, ಪ್ರತಿಭಟನಕಾರರನ್ನು ಚದುರಿಸಲು ಜಲಫಿರಂಗಿ ಪ್ರಯೋಗ

ಪ್ರಧಾನಿ ಮೋದಿ ವಾರಕ್ಕೆ 100 ಗಂಟೆ ಕೆಲಸ ಮಾಡುವ ಏಕೈಕ ವ್ಯಕ್ತಿ: ನಾರಾಯಣ ಮೂರ್ತಿ

Karnataka Rain Alert: ಮುಂದಿನ 7 ದಿನಗಳ ಕಾಲ ಈ ಪ್ರದೇಶದಲ್ಲಿ ಭಾರೀ ಮಳೆ

ಬಿಜೆಪಿ, ಜೆಡಿಎಸ್ ಬೆಂಗಳೂರಿನ ಪರಿಸರ ಹಾಳು ಮಾಡುತ್ತಿದೆ: ರಣದೀಪ್ ಸುರ್ಜೇವಾಲ

ಮುಂದಿನ ಸುದ್ದಿ
Show comments