Select Your Language

Notifications

webdunia
webdunia
webdunia
webdunia

ಸಿಎಂ ಜಯಲಲಿತಾಗೆ ಅನಾರೋಗ್ಯ: ಶುಭಕೋರಿ ಮಾನವೀಯತೆ ಮೆರೆದ ಸಿಎಂ ಸಿದ್ದರಾಮಯ್ಯ

ಸಿಎಂ ಜಯಲಲಿತಾಗೆ ಅನಾರೋಗ್ಯ: ಶುಭಕೋರಿ ಮಾನವೀಯತೆ ಮೆರೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು , ಶುಕ್ರವಾರ, 23 ಸೆಪ್ಟಂಬರ್ 2016 (13:02 IST)
ಅನಾರೋಗ್ಯದಿಂದ ಬಳಲುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಶೀಘ್ರ ಗುಣಮುಖರಾಗಿ ಎಂದು ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾನವೀಯತೆ ಮೆರೆದಿದ್ದಾರೆ.  
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳ ಮಧ್ಯ ಆಕ್ರೋಶ ಭುಗಿಲೆದ್ದಿದ್ದರು ಕೂಡಾ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಆರೋಗ್ಯದ ಕಾಳಜಿವಹಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಮಾನವೀಯತೆಗೆ ಕನ್ನಡಿಗರು ಸಾಕ್ಷ್ಯ ಎಂದು ಸಾಭೀತು ಪಡಿಸಿದ್ದಾರೆ. 
 
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಜ್ವರ ಹಾಗೂ ನಿರ್ಜಲೀಕರಣದಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದ್ದು ನಿನ್ನೆ ತಡರಾತ್ರಿಯಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 
 
ಅವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿಟ್ಟು ನೋಡಿಕೊಳ್ಳಲಾಗುತ್ತಿದೆ ಎಂದು ಅಪೋಲೊ ಆಸ್ಪತ್ರೆ ಮುಖ್ಯ ನಿರ್ವಹಣಾ ಅಧಿಕಾರಿ ಸುಬ್ಬಯ್ಯ ವಿಶ್ವನಾಥನ್ ತಿಳಿಸಿದ್ದಾರೆ. 
 
'ಅಮ್ಮ' ಆಸ್ಪತ್ರೆ ಸೇರಿರುವುದರಿಂದ ಆತಂಕಕ್ಕೆ ಒಳಗಾಗಿರುವ ನೂರಾರು ಅನುಯಾಯಿಗಳು, ಕಾರ್ಯಕರ್ತರು ಆಸ್ಪತ್ರೆಯ ಮುಂದೆ ಜಮಾಯಿಸಿದ್ದು, ಪೊಲೀಸರು ಅವರನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ವಿಚಾರದಲ್ಲಿ ಬಿಜೆಪಿ ರಾಜಕಾರಣ: ಎನ್‌ಎಸ್‌ಯುಐನಿಂದ ಪ್ರತಿಭಟನೆ