Select Your Language

Notifications

webdunia
webdunia
webdunia
webdunia

ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತರಾಟೆ

ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತರಾಟೆ
ಮೈಸೂರು , ಬುಧವಾರ, 25 ಜನವರಿ 2017 (12:35 IST)
ಕುಡಿಯುವ ನೀರು ಸರಬರಾಜು ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಿಮಗೆ ಮಾನ ಮರ್ಯಾದೆ ಇದೆಯಾ? ಜನರಿಗೆ ಕುಡಿಯಲು ನೀರು ಕೊಡಲಾಗದ ಮೇಲೆ ಇಲ್ಲಿ ಯಾಕೆ ಇದ್ದೀರಾ? ಎಂದು ಕಿಡಿಕಾರಿದರು. 
ಮೈಸೂರಿನಲ್ಲಿ ನಡೆಯುತ್ತಿರುವ ಕೆಡಿಪಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. 
 
ಒಂದು ವಾರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯದಿದ್ದರೆ ನಿಮ್ಮಿಬ್ಬರನ್ನು ಸಸ್ಪೆಂಡ್ ಮಾಡುತ್ತೇನೆ ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
 
ಗ್ರಾಮೀಣ ನೀರು ಸರಬರಾಜು ಅಧೀಕ್ಷಕ ಪ್ರಕಾಶ್ ರಾಜ್ ಹಾಗೂ ನೀರಾವರಿ ಇಲಾಖೆಯ ಅಧಿಕಾರಿ ಮಂಜುನಾಥ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೆಂಗಣ್ಣಿಗೆ ಗುರಿಯಾದ ಅಧಿಕಾರಿಗಳು ಎಂದು ತಿಳಿದು ಬಂದಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ರಾಮಮಂದಿರ ಅಸ್ತ್ರವನ್ನು ಕೈಗೆತ್ತಿಕೊಂಡ ಬಿಜೆಪಿ